2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಲೇ ಇರಲಿಲ್ಲ: ರಾಹುಲ್ ಗಾಂಧಿ

ನವದೆಹಲಿ: 2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಲೇ ಇರಲಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ(Rahul Gandhi) ಆಡಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅದು ಅಧಿಕಾರಕ್ಕೆ ಬರುವುದಕ್ಕೂ ಮೊದಲು ದೇಶದಲ್ಲಿ ಗುಂಪು ಹತ್ಯೆ (lynching) ಎಂಬುದನ್ನು ಪ್ರಾಯೋಗಿಕವಾಗಿ ನೋಡಲು ಸಾಧ್ಯವೇ ಇರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದ ನಂತರವೇ ಗುಂಪು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಅದಕ್ಕೂ ಮೊದಲು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗುಂಪು ಹತ್ಯೆಗಳು ನಡೆಯುತ್ತಿರಲಿಲ್ಲ ಎಂದಿದ್ದಾರೆ. ಪಂಜಾಬ್‍ನಲ್ಲಿ ಇತ್ತೀಚೆಗೆ 24ಗಂಟೆಯೊಳಗೆ ಎರಡು ಗುಂಪು ಹತ್ಯೆಗಳು ನಡೆದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ. ದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

bjp - congress

ಪಂಜಾಬ್‌ನಲ್ಲಿ ಆಗಿದ್ದೇನು?: ಪಂಜಾಬ್‍ನ ಕಪುರ್ತಲಾದಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಕಾರ್ಮಿಕ ಶ್ರೀ ಗುರು ಗ್ರಂಥ ಸಾಹಿಬ್‍ನ ರೂಪವನ್ನು ಅಪವಿತ್ರಗೊಳಿಸಲು ಪ್ರಯತ್ನಿಸಿದನು ಎಂದು ಆತನನ್ನು ಹಿಡಿದು ಥಳಿಸಿದ್ದಾರೆ. ಈ ಯುವಕ ಕಳ್ಳತನ ಮಾಡಲು ಬಂದಿದ್ದಾನೆಯೇ ಹೊರತು ಅಪ್ರಾಮಾಣಿಕನಾಗಿರಲು ಅಲ್ಲ ಎಂದು ಪೊಲೀಸರು ಹೇಳಿದ್ದಾರೆ. ದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

RAHUL GANDHI

ಗೋಲ್ಡನ್ ಟೆಂಪಲ್‍ನಲ್ಲಿ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಲು ಯತ್ನಿಸಿದ ಯುವಕನನ್ನು ಅಮೃತಸರದ ಗೋಲ್ಡನ್ ಟೆಂಪಲ್‍ನಲ್ಲಿ ಹತ್ಯೆ ಮಾಡಲಾಗಿದೆ. ಕೋರ್ಟ್ ನಲ್ಲಿಟ್ಟಿದ್ದ ಕತ್ತಿಯನ್ನು ಯುವಕ ಎತ್ತಿಕೊಂಡು ಅನುಚಿತವಾಗಿ ವರ್ತಿಸಿದ್ದಾನೆ. ಇದನ್ನು ಕಂಡ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಥಳಿಸಿ ಕೊಂದಿದ್ದಾರೆ.

Comments

Leave a Reply

Your email address will not be published. Required fields are marked *