ಎಚ್‍ಡಿಕೆ ವಿರುದ್ಧ ಎತ್ತಿನಗಾಡಿ ಪ್ರತಿಭಟನೆ ಯಾವಾಗ: ರಾಹುಲ್ ಗಾಂಧಿಗೆ ಪ್ರಶ್ನೆ

ಬೆಂಗಳೂರು: ಟ್ವಿಟ್ಟರ್ ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕನ್ನಡಿಗರು ಲೆಫ್ಟು ರೈಟು ತೆಗೆದುಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿಯವರು ಪೆಟ್ರೋಲ್, ಡೀಸೆಲ್ ಮೇಲೆ ಸೆಸ್ ಮೇಲೆ ಹಾಕಿದ್ದನ್ನು ವಿರೋಧಿಸಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಏರಿಕೆಯಾದಾಗ ಮೋದಿ ಸರ್ಕಾರದ ವಿರುದ್ಧ ಸೈಕಲ್ ತುಳಿದು ಪ್ರತಿಭಟನೆ ಮಾಡುವ ನೀವು ಈಗ ಕರ್ನಾಟಕಕ್ಕೆ ಬಂದು ಪ್ರತಿಭಟಿಸಿ ಎಂದು ಬರೆದು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ನಿಮ್ಮದೆ ಸಮ್ಮಿಶ್ರ ಸರ್ಕಾರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಸರಿಯೇ ಎಂದು ಪ್ರಶ್ನಿಸಿ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ವಿರುದ್ಧ ವಿರುದ್ಧ ಸರಣಿ ಟ್ವೀಟ್ ಮಾಡಿ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

https://twitter.com/RKDubey7878/status/1014802700792287232

ಪೆಟ್ರೋಲ್ ಮೇಲಿದ್ದ ಸೆಸ್ ಶೇ.30 ರಿಂದ ಶೇ.32 ಮತ್ತು ಡೀಸೆಲ್ ಸೆಸ್ ಪ್ರಸ್ತುತ ಶೇ.19ರಿಂದ 21ಕ್ಕೆ ಏರಿಗೆ ಮಾಡಲಾಗಿದೆ. ಸೆಸ್ ಏರಿಕೆಯಾದ ಪರಿಣಾಮ ಒಟ್ಟಾರೆಯಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.14 ರೂ. ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆ 1.12 ರೂ. ಏರಿಕೆಯಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಹುಲ್ ಗಾಂಧಿ ಕೋಲಾರದಲ್ಲಿ ಸೈಕಲ್ ತುಳಿಯುವ ಮೂಲಕ ಕೇಂದ್ರದ ವಿರುದ್ಧ ಪ್ರತಿಭಟಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಫಿಟ್ನೆಸ್ ಚಾಲೆಂಜ್ ಟ್ರೆಂಡ್ ಇದ್ದಾಗ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರಿಗೆ ತೈಲ ಬೆಲೆಯನ್ನು ಇಳಿಸಿ ಇಲ್ಲದೇ ಇದ್ದರೆ ದೇಶವ್ಯಾಪಿ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಬರೆದು ಟ್ವೀಟ್ ಮಾಡಿದ್ದರು.

https://twitter.com/Jaiku12/status/1014843204867198976

https://twitter.com/AkshayVandure1/status/1014797860523556864

 

Comments

Leave a Reply

Your email address will not be published. Required fields are marked *