ಬಡವರ ಪಡಿತರ ಅಕ್ಕಿಗೂ ಕನ್ನ ಹಾಕಿದ ಖದೀಮರು

ರಾಯಚೂರು: ಬಡವರಿಗೆ ಹಂಚಬೇಕಾದ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಟ್ಟುಕೊಂಡಿದ್ದ ಖದೀಮರು ಸಿಕ್ಕಿಬಿದ್ದಿದ್ದಾರೆ.

ಜಿಲ್ಲೆಯ ದೇವದುರ್ಗದ ಮನೆಯೊಂದರಲ್ಲಿ 99 ಅಕ್ಕಿ ಚೀಲಗಳನ್ನ ಸಂಗ್ರಹಿಟ್ಟಿದ್ದ ಆರೋಪಿಗಳಾದ ಶ್ರೀಕಾಂತ್, ಬಸವರಾಜನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲಿಂಗಸೂಗೂರು ಡಿವೈಎಸ್ ಪಿ ಎಸ್.ಎಸ್. ಹುಲ್ಲೂರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಳಿ ವೇಳೆ ಒಂದು ಲಕ್ಷ ಹತ್ತು ಸಾವಿರ ಮೌಲ್ಯದ 99 ಅಕ್ಕಿ ಚೀಲಗಳು ಪತ್ತೆಯಾಗಿವೆ.

ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕಳ್ಳತನದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತಿಳಿದುಕೊಳ್ಳಲು ಆರೋಪಿಗಳ ವಿಚಾರಣೆ ಮುಂದುವರಿದಿದೆ. ಆರೋಗ್ಯ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ತಲುಪಬೇಕಿದ್ದ ಪಡಿತರ ಕಂಡೋರ ಪಾಲಾಗುತ್ತಿದೆ. ಇದರಲ್ಲಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

Comments

Leave a Reply

Your email address will not be published. Required fields are marked *