ಮದ್ವೆಯಾದ ಐದು ತಿಂಗ್ಳಿಗೆ ರೈಲ್ವೆ ಸಿಬ್ಬಂದಿ ನೇಣಿಗೆ ಶರಣು

– ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಶಂಕೆ
– ಮೃತದೇಹದ ಬಳಿ ಡೆತ್‍ನೋಟ್ ಪತ್ತೆಯಾಗಿಲ್ಲ

ಹೈದರಾಬಾದ್: ಮದುವೆಯಾದ ಐದೇ ತಿಂಗಳಿಗೆ ರೈಲ್ವೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಆಂಧ್ರ ಪ್ರದೇಶದ ಹೈದರಾಬಾದ್‍ನಲ್ಲಿ ನಡೆದಿದೆ.

ರಾಹುಲ್ ಯಾದವ್(26) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸೋಮವಾರ ರಾಹುಲ್ ಮೃತದೇಹ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೌಟುಂಬಿಕ ಕಲಹದಿಂದ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಐದು ತಿಂಗಳ ಹಿಂದೆ ರಾಹುಲ್ ಮದುವೆಯಾಗಿದ್ದನು. ಸೋಮವಾರ ಬೆಳಗ್ಗೆ ರಾಹುಲ್ ಕೆಲಸಕ್ಕೆ ಹೋಗಬೇಕಿತ್ತು. ಆದರೆ ಆತ ಸುತ್ತಮುತ್ತ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಆತನನ್ನು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಆತ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು. ತಕ್ಷಣ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆಗ ವೈದ್ಯರು ರಾಹುಲ್ ಮೃತಪಟ್ಟಿದ್ದಾನೆ ಅಂತ ತಿಳಿಸಿದರು ಎಂದರು.

ಈ ಘಟನೆ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆಗಾಗಿ ಆತನ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ರವಾನಿಸಿದರು. ಕೌಟುಂಬಿಕ ಸಮಸ್ಯೆಯಿಂದ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ರಾಹುಲ್ ಮೃತದೇಹದ ಬಳಿ ಪೊಲೀಸರಿಗೆ ಯಾವುದೇ ಡೆತ್‍ನೋಟ್ ಸಿಕ್ಕಿಲ್ಲ.

ಈ ಬಗ್ಗೆ ನೆರೆಡ್ಮೆಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Comments

Leave a Reply

Your email address will not be published. Required fields are marked *