ನೈತಿಕ ಹೊಣೆ ಹೊತ್ತು ರೈಲ್ವೇ ಸಚಿವ ಸುರೇಶ್ ಪ್ರಭು ರಾಜೀನಾಮೆ? ಮೋದಿ ಹೇಳಿದ್ದೇನು?

ನವದೆಹಲಿ: ಒಂದು ವಾರದೊಳಗಡೆ ಎರಡು ರೈಲು ದುರಂತ ಸಂಭವಿಸಿ ಟೀಕೆಗೆ ಒಳಗಾಗಿರುವ ಸುರೇಶ್ ಪ್ರಭು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಕೈಫಿಯತ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 70 ಜನ ಗಾಯಗೊಂಡಿರುವ ಘಟನೆಯ ಬಳಿಕ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸುರೇಶ್ ಪ್ರಭು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಭೇಟಿ ವೇಳೆ ಸ್ವಲ್ಪ ಸಮಯ ಕಾಯಿರಿ ಎನ್ನುವುದಾಗಿ ಮೋದಿ ನನಗೆ ಹೇಳಿದ್ದಾರೆ ಎಂದು ಸುರೇಶ್ ಪ್ರಭು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ರೈಲು ದುರಂತದ ಬಳಿಕ ಸರಣಿ ಟ್ವೀಟ್ ಮಾಡಿರುವ ಸುರೇಶ್ ಪ್ರಭು ಅವರು ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಕಳೆದ ಮೂರು ವರ್ಷ ನಾನು ರೈಲ್ವೇಯ ಬೆಳವಣಿಗೆ ತುಂಬಾ ಶ್ರಮ ಪಟ್ಟಿದ್ದೇನೆ. ಕಳೆದ ಎರಡು ದಶಕಗಳಿಂದ ಹದೆಗೆಟ್ಟಿದ್ದ ರೈಲ್ವೇಯನ್ನು ಮೇಲಕ್ಕೆ ಎತ್ತಲು ಮೋದಿ ಸರ್ಕಾರ ತುಂಬಾ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಉತ್ಕಲ್ ರೈಲು ದುರಂತ ನೆನಪು ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 70 ಜನ ಗಾಯಗೊಂಡಿರುವ ಘಟನೆ ಮಂಗಳವಾರ ಅವೌರೇಯಾ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಉತ್ಕಲ್ ರೈಲು ದುರಂತ ಸಂಭವಿಸಿ 22 ಮಂದಿ ಮೃತಪಟ್ಟಿದ್ದರು.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೂರು ವರ್ಷಗಳ ಕಾಲ ರೈಲ್ವೇ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಶ್ ಪ್ರಭು ಅವರು ಖಾಸಗಿ ಸಂಸ್ಥೆಗಳು ನಡೆಸುವ ‘ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಚಿವರ’ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿದ್ದರು. ಇತ್ತೀಚೆಗೆ ಇಂಡಿಯಾ ಟುಡೇ ಅವರು ಮೋದಿ ಸಂಪುಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಟಾಪ್ -5 ಮಂತ್ರಿಗಳ ಪಟ್ಟಿಯಲ್ಲೂ ಸುರೇಶ್ ಪ್ರಭು ಸ್ಥಾನವನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ರೈಲು ದುರಂತ ಸಂಭವಿಸಿದ್ದು ಹೇಗೆ ವಿಡಿಯೋ ನೋಡಿ

Comments

Leave a Reply

Your email address will not be published. Required fields are marked *