ನೀರಿನ ಬಾಟಲಿಗೆ ಜಗಳ – ಚಲಿಸುವ ರೈಲಿನಿಂದ ಹೊರಗೆ ದೂಡಿದ ಸಿಬ್ಬಂದಿ

ಲಕ್ನೋ: ರೈಲ್ವೇ ಸಿಬ್ಬಂದಿಯೊಬ್ಬ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಗೆ ದೂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯ ಲಲಿತ್‌ಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರವಿ ಯಾದವ್ ತನ್ನ ಸಹೋದರಿಯೊಂದಿಗೆ ರಪ್ತಿಸಾಗರ್ ಎಕ್ಸ್‌ಪ್ರೆಸ್(12591)ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಜಿರೋಲಿ ಗ್ರಾಮದ ಬಳಿ ತಲುಪಿದಾಗ, ನೀರಿನ ಬಾಟಲಿಯನ್ನು ಖರೀದಿಸುವ ಹಾಗೂ ಪಾನ್ ಮಸಾಲವನ್ನು ಉಗುಳುವ ವಿಚಾರದಲ್ಲಿ ರವಿ ಯಾದವ್‌ಗೆ ರೈಲ್ವೇ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆದಿದೆ. ಇದನ್ನೂ ಓದಿ: ಭಾರತದ ಜಲಗಡಿಗೆ ಬಂದಿದ್ದ ಪಾಕ್ ಯದ್ಧನೌಕೆಯನ್ನು ಓಡಿಸಿದ ಡಾರ್ನಿಯರ್

ಬಳಿಕ ರವಿ ಯಾದವ್ ಸಹೋದರಿ ಲಲಿತ್‌ಪುರ ನಿಲ್ದಾಣದಲ್ಲಿ ರೈಲಿನಿಂದ ಇಳಿದಿದ್ದಾರೆ. ಆದರೆ ಸಿಬ್ಬಂದಿ ರವಿ ಯಾದವ್‌ನನ್ನು ಹೊರ ಹೋಗಲು ಬಿಟ್ಟಿರಲಿಲ್ಲ. ಬಳಿಕ ಸಿಬ್ಬಂದಿ ಆತನಿಗೆ ಥಳಿಸಿ, ಚಲಿಸುತ್ತಿದ್ದ ರೈಲಿನಿಂದಲೇ ಟ್ರ್ಯಾಕ್‌ಗೆ ದೂಡಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ರವಿಯನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಎದ್ದು ಬಿದ್ದು ಬ್ಯಾಟಿಂಗ್‌ಗೆ ಆಗಮಿಸಿದ ಯಾಸ್ತಿಕಾ ಭಾಟಿಯಾ – ಬಿದ್ದು ಬಿದ್ದು ನಕ್ಕ ಸ್ಮೃತಿ, ಕೌರ್

ಸದ್ಯ ರವಿ ಯಾದವ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರು ನೀಡಿದ ದೂರಿನ ಆಧಾರದ ಮೇಲೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲಾಗಿದೆ. ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸರ್ಕಾರಿ ರೈಲ್ವೇ ಪೊಲೀಸ್ ಸರ್ಕಲ್ ಅಧಿಕಾರಿ ಮೊಹಮ್ಮದ್ ನಯೀಮ್ ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *