ಸ್ಟೇಷನ್‍ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ – ಹೊತ್ತಿ ಉರಿದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್

ಪಾಟ್ನಾ: ಬಿಹಾರದ ಮಧುಬನಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಪೂರ್ವ ಕೇಂದ್ರ ರೈಲ್ವೆ (ಇಸಿಆರ್) ತಿಳಿಸಿದೆ.

ಪೂರ್ವ ಕೇಂದ್ರ ರೈಲ್ವೆ ಪ್ರಕಾರ ಇಂದು ಬೆಳಗ್ಗೆ 9.13ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 9.50ಕ್ಕೆ ಬೆಂಕಿ ನಂದಿಸಲಾಗಿದೆ. ಜಯನಗರದಿಂದ ನವದೆಹಲಿಗೆ ತೆರಳುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್‍ನಲ್ಲಿ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

ಈ ಮುನ್ನ ಐದು ಬೋಗಿಗಳಿಗೆ ಬೆಂಕಿ ತಗುಲಿದೆ ಎಂದು ವರದಿಯಾಗಿತ್ತು. ಆದರೆ ರೈಲಿನ ಒಂದು ಬೋಗಿಗೆ ಮಾತ್ರ ಬೆಂಕಿ ಹೊತ್ತಿಕೊಂಡಿದೆ ಮತ್ತು ಈ ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ಇಸಿಆರ್ ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು ಮತ್ತು ಘಟನೆ ಕುರಿತಂತೆ ಸರ್ಕಾರಿ ರೈಲ್ವೆ ಪೊಲೀಸರು, ರೈಲು ರಕ್ಷಣಾ ಪಡೆ ತನಿಖೆ ನಡೆಸುತ್ತಿದೆ. ಇದನ್ನು ರೈಲ್ವೆ ಆಡಳಿತ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ. ಅಲ್ಲದೇ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

Comments

Leave a Reply

Your email address will not be published. Required fields are marked *