ಪ್ರವಾಹದ ಭೀತಿ – ಗ್ರಾಮ ತೊರೆದ ಗ್ರಾಮಸ್ಥರು

ಚಾಮರಾಜನಗರ: ಕೆಆರ್ ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಅಧಿಕ ನೀರು ಹೊರ ಬಿಡುತ್ತಿರುವ ಹಿಲೆನ್ನೆಯಲ್ಲಿ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹಲವು ಗ್ರಾಮದ ಜನರು ಪ್ರವಾಹದ ಭೀತಿಯಿಂದ ಗ್ರಾಮಗಳಿಂದ ವಲಸೆ ಹೋಗುತ್ತಿದ್ದಾರೆ.

ಕೊಳ್ಳೇಗಾಲ ತಾಲೂಕಿನ ದಾಸನಪುರ, ಹಳೆಹಂಪಾಪುರ, ಎಡಕೂರಿಯ, ಹಣೆಗನಹಳ್ಳಿ ಮತ್ತು ಮುಳ್ಳುರು ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಇದೀಗ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ ಇಲ್ಲಿನ ಗ್ರಾಮಸ್ಥರು ತಮ್ಮ ಗ್ರಾಮವನ್ನು ಬಿಟ್ಟು ತಮ್ಮ ಸಂಬಂಧಿಕರ ಮನೆಗಳಿಗೆ ಹಾಗೂ ಗಂಜಿಕೇಂದ್ರಗಳತ್ತ ತೆರಳುತ್ತಿದ್ದಾರೆ.

ಈಗಾಗಲೇ ಗ್ರಾಮದ ಎಲ್ಲಾ ಜಮೀನುಗಳು ಜಲಾವೃತಗೊಂಡಿದ್ದು, ಇದರಿಂದ ಜಮೀನಿನಲ್ಲಿ ಬೆಳೆಯುತ್ತಿದ್ದ ಕಬ್ಬು, ಭತ್ತ, ರಾಗಿ, ಜೋಳೆ ಸೇರಿದಂತೆ ಇನ್ನಿತರ ಬೆಳೆಗಳು ನಾಶವಾಗಿವೆ. ಇದಲ್ಲದೇ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವುದರಿಂದ ಗ್ರಾಮಗಳ ಅನೇಕ ಮನೆಗಳು ಈಗಾಗಲೇ ಮುಳುಗಡೆಯಾಗಿವೆ.

ಹೀಗಾಗಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಗ್ರಾಮಗಳಿ ಭೇಟಿ ನೀಡಿ ಗ್ರಾಮದಲ್ಲಿನ ಜನರನ್ನು ಬೇರೊಂದು ಕಡೆ ವಲಸೆ ಹೋಗುವಂತೆ ಅಥವಾ ಗಂಜಿ ಕೇಂದ್ರಗಳಿಗೆ ತೆರಳುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *