ನೂರಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು -ಪ್ರವಾಹದ ಭೀತಿಯಲ್ಲಿ ಜನರು

ದಾವಣಗೆರೆ: ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ತುಂಗಾ ಹಾಗೂ ಭದ್ರಾ ನದಿಗಳಿಂದ ಸುಮಾರು 1.45 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ನೂರಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ್ದು, ಸಂತ್ರಸ್ಥರಿಗೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗಂಜಿ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ನದಿಯ ತಟದಲ್ಲಿರುವ ಹರಿಹರ ತಾಲೂಕಿನ ಉಕ್ಕಡಗಾತ್ರಿಯ ಅಜ್ಜಯ್ಯನ ದೇವಸ್ಥಾನದ ಮುಂಭಾಗಕ್ಕೆ ನೀರು ನುಗ್ಗಿದ್ದು, ದೇವಸ್ಥಾನದ ಮುಂಭಾಗವಿರುವ ಮನೆಗಳಿಗೆ ಹಾಗೂ ಅಂಗಡಿ ಮುಂಗಟ್ಟುಗಳಿಗೆ ಹೊಳೆ ನೀರು ನುಗ್ಗಿದೆ.

ಪರಿಣಾಮ ತೆಪ್ಪದ ಮೂಲಕ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದಾರೆ. ಇನ್ನೊಂದೆಡೆ ಹರಿಹರ ತಾಲೂಕಿನ ಚಿಕ್ಕಬಿದರೆ ಹಾಗೂ ಸಾರಥಿ ಗ್ರಾಮಗಳಿಗೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಜಿಲ್ಲಾಡಳಿತ ಬೆಳಗ್ಗಿನಿಂದಲೇ ದೋಣಿ ಸಂಚಾರ ಆರಂಭಿಸಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ನದಿಯಲ್ಲಿ 11.06 ಮೀಟರ್ ಎತ್ತರದಲ್ಲಿ ನೀರು ಹರಿಯುತ್ತಿದ್ದು, ಇನ್ನಷ್ಟು ನೀರು ಬಂದರೆ 12 ಗ್ರಾಮಗಳಿಗೆ ಪ್ರವಾಹದ ಭೀತಿಯಲ್ಲಿವೆ. ಕ್ಷಣ ಕ್ಷಣಕ್ಕೆ ಹೆಚ್ಚಾಗುತ್ತಿರುವ ನೀರಿನ ಮಟ್ಟದಿಂದ ನದಿ ಪಾತ್ರದ ಜನರು ಆತಂಕದಲ್ಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *