ಈ ಡೌವ್‌ಗಳನ್ನು ಬಿಟ್ಟು ಮನೆ ಕಡೆ ಹೋಗೋದು ಒಳ್ಳೆಯದು: ಚೈತ್ರಾಗೆ ರಜತ್ ಟಾಂಗ್

ಬಿಗ್ ಬಾಸ್ ಸೀಸನ್ 11ರ (Bigg Boss Kannada 11)  ಸೂಪರ್ ಸಂಡೇ ಕಾರ್ಯಕ್ರಮಕ್ಕೆ ಸುದೀಪ್ ಎಂದಿನಂತೆ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇವತ್ತು ಟ್ವಿಸ್ಟ್ ಮೇಲೆ ಟ್ವಿಸ್ಟ್‌ಗಳು ಎದುರಾಗುತ್ತಿವೆ. ಈಗಾಗಲೇ 80 ದಿನಗಳನ್ನು ಪೂರೈಸಿರುವ ಬಿಗ್ ಬಾಸ್ ಸೀಸನ್ 11 ಈಗ ಕೆಲವೇ ಕೆಲವು ವಾರಗಳಷ್ಟೇ ಬಾಕಿ ಉಳಿದಿದೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರದ ಎಲಿಮಿನೇಷನ್ ಕೂಡ ರೋಚಕವಾಗಿದೆ. ಈ ವಾರ ಮನೆಯಿಂದ ಯಾರು ಹೊರಗೆ ಬರುತ್ತಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ. ಇದೀಗ ಸುದೀಪ್ ಮನೆಯ ಸದಸ್ಯರಿಗೆ ಸ್ಪೆಷಲ್ ಟಾಸ್ಕ್‌ವೊಂದು ನೀಡಿದ್ದಾರೆ. ನಿಮ್ಮ ಪ್ರಕಾರ, ಬಿಗ್ ಬಾಸ್ ಮನೆಯಲ್ಲಿ ಇವರ ಇಂಪಾರ್ಟೆನ್ಸ್ ಇಲ್ಲ ಎನ್ನುವವರು ಅವರ ಫೋಟೋವನ್ನು ಮೂಟೆಗೆ ಅಂಟಿಸಿ ಕಸದ ಬುಟ್ಟಿಗೆ ಹಾಕಬೇಕು ಎಂದರು. ಆಗ ಈ ಟಾಸ್ಕ್‌ನಲ್ಲಿ ಬಹುತೇಕ ಸ್ಪರ್ಧಿಗಳು ಎಲ್ಲರೂ ಚೈತ್ರಾ (Chaithra Kundapura) ಮೇಲೆ ತಿರುಗಿ ಬಿದ್ದಿದ್ದಾರೆ.

ಭವ್ಯಾ, ಮೋಕ್ಷಿತಾ, ರಜತ್, ಐಶ್ವರ್ಯಾ, ಗೌತಮಿ, ಹನುಮಂತ ಎಲ್ಲರೂ ಚೈತ್ರಾರನ್ನೇ ಕಸದ ಬುಟ್ಟಿಗೆ ಹಾಕಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ಸೂಕ್ತವಾದ ಕಾರಣಗಳನ್ನ ನೀಡಿದ್ದು, ಚೈತ್ರಾರವರು ಗರಂ ಆಗಿದ್ದಾರೆ. ಇದನ್ನೂ ಓದಿ:ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ತೆಲಂಗಾಣ ಸಿಎಂ ಆರೋಪಕ್ಕೆ ಅಲ್ಲು ಅರ್ಜುನ್‌ ಬೇಸರ

ಐಶ್ವರ್ಯಾ ಅವರು ಚೈತ್ರಾ ಅವರಿಗೆ ನೀವು ಮುಖವಾಡ ಕಳಚುತ್ತೇನೆ ಎಂದಿದ್ದೀರಿ. ಆದರೆ ಅವರೇ ಒಂದು ವೇಷ ತೊಟ್ಟುಕೊಂಡು ಆಟ ಆಡುತ್ತಿದ್ದಾರೆ ಎಂದಿದ್ದಾರೆ. ಹನುಮಂತ ಕೂಡ ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಅನ್ನೋ ಹಂಗೆ ಚೈತ್ರಕ್ಕ ಈ ಮನೆಯನ್ನೇ ಕೆಡಿಸಿ ಬಿಟ್ಟಿದ್ದಾಳೆ ಎಂದು ಖಡಕ್ ಡೈಲಾಗ್ ಹೇಳಿದ್ದಾನೆ.

ಕಳಪೆ ಬಂತು ಅಂದರೆ ಚೈತ್ರಾ ಫುಲ್ ಹುಷಾರು ತಪ್ಪುತ್ತಾರೆ. ವೀಕೆಂಡ್‌ನಲ್ಲಿ ಫುಲ್ ಡಲ್ ಆಗಿರುತ್ತಾರೆ. ಮತ್ತೆ ರಾತ್ರಿ ಇಮಿಡಿಯೇಟ್ ಆಗಿ ಚಾರ್ಜ್ ಆಗ್ತಾರೆ. ಫೈರ್ ಬ್ರಾಂಡ್ ಈಸ್ ಬ್ಯಾಕ್ ಅಂತಾರೆ ಇದು ಹೇಗೆ ಅನ್ನೋದು ಗೊತ್ತಿಲ್ಲ ಎಂದು ಮೋಕ್ಷಿತಾ ರಾಂಗ್‌ ಆಗಿದ್ದಾರೆ. ಬಳಿಕ ಈ ಡೌವ್‌ಗಳನ್ನ ಬಿಟ್ಟು ಮನೆ ಕಡೆ ಹೋಗೋದು ಒಳ್ಳೆಯದು ಎಂದು ಚೈತ್ರಾಗೆ ರಜತ್ (Rajath) ಟಾಂಗ್ ಕೊಟ್ಟಿದ್ದಾರೆ.