ರಾಜ್ಯಸಭಾ ಚುನಾವಣೆ: ಜೆಡಿಎಸ್‌ಗೆ ಬಿಗ್ ಶಾಕ್ ಕೊಟ್ಟ ಗುಬ್ಬಿ ಶ್ರೀನಿವಾಸ್

ಬೆಂಗಳೂರು: ಜೆಡಿಎಸ್ ನಾಯಕರಿಗೆ ಗುಬ್ಬಿ ಶ್ರೀನಿವಾಸ್ ಶಾಕ್ ಕೊಟ್ಟಿದ್ದಾರೆ. ಇಂದಿನ ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸ್ ಖಾಲಿ ಪೇಪರ್ ಅನ್ನು ಬ್ಯಾಲೆಟ್ ಬಾಕ್ಸ್‌ಗೆ ಹಾಕಿ ಸಂಚಲನ ಮೂಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಶ್ರೀನಿವಾಸ್ ಅವರು ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದಾರೆ. ಸಾಯಂಕಾಲ ಇವರ ಹಣೆಬರಹ ಗೊತ್ತಾಗುತ್ತದೆ. ನಮ್ಮ ಪಕ್ಷದಲ್ಲಿ ನಿಂತು ನಮಗೆ ದ್ರೋಹ ಮಾಡಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ಪಕ್ಷಕ್ಕೆ ರಾಜೀನಾಮೆ ನೀಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಅಡ್ಡಮತದಾನ

ಗುಬ್ಬಿ ಶ್ರೀನಿವಾಸ್ ಅವರು ಖಾಲಿ ಬ್ಯಾಲೆಟ್ ಹಾಕಿದ್ದಾರೋ ಇಲ್ಲವೋ ಎನ್ನುವುದು ಇನ್ನೂ ಅಧಿಕೃತವಾಗಿ ತಿಳಿದು ಬಂದಿಲ್ಲ. ಒಂದು ವೇಳೆ ಯಾರಿಗೂ ಮತ ಹಾಕದೇ ಖಾಲಿ ಬ್ಯಾಲೆಟ್ ಹಾಕಿದರೆ ಮತ ತಿರಸ್ಕೃತವಾಗಲಿದೆ. ಸಂಜೆ ಚುನಾವಣಾ ಎಣಿಕೆಯ ವೇಳೆ ಎಲ್ಲವೂ ಸ್ಪಷ್ಟವಾಗಲಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ರೇವಣ್ಣ ಮತ ತಿರಸ್ಕೃತವಾಗುತ್ತಾ?

ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಗುಬ್ಬಿ ಶ್ರೀನಿವಾಸ್ ಅವರು ನಾನು ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕಿದ್ದೇನೆ ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು ಜೆಡಿಎಸ್ ಶ್ರೀನಿವಾಸ ಗೌಡ ಅವರು ಅಡ್ಡ ಮತದಾನ ಮಾಡಿದ್ದರು.

Comments

Leave a Reply

Your email address will not be published. Required fields are marked *