2019 ಲೋಕಸಭಾ ಚುನಾವಣೆ ವೇಳೆಗೆ ರಾಮಮಂದಿರ ನಿರ್ಮಾಣ ಆರಂಭ – ಶಾ ವಿರುದ್ಧ ಓವೈಸಿ ವಾಗ್ದಾಳಿ

ಹೈದರಾಬಾದ್: 2019ರ ಲೋಕಾಸಭಾ ಚುನಾವಣೆ ವೇಳೆಗೆ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ ಮಾಡುವ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಈ ಹೇಳಿಕೆ ವಿರುದ್ಧ ಸದ್ಯ ಓವೈಸಿ ವಾಗ್ದಾಳಿ ನಡೆಸಿದ್ದು, 2019ರ ಬಳಿಕ ಈ ತೀರ್ಪು ನೀಡಲು ಹೇಳಿದೆ.

ತೆಲಂಗಾಣ ಪ್ರವಾಸ ಕೈಗೊಂಡಿದ್ದ ಅಮಿತ್ ಶಾ ಅವರು, ಹೈದರಾಬಾದ್ ನಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಹೇಳಿಕೆ ನೀಡಿದ್ದರು ಎಂದು ವರದಿಯಾಗಿತ್ತು. ಆದರೆ ಈ ಬಳಿಕ ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಬಿಜೆಪಿ ಇಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿತ್ತು.

ತೆಲಂಗಾಣದಲ್ಲಿ ನಡೆದ ಪಕ್ಷದ ನಾಯಕರ ಸಭೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಅಮಿತ್ ಶಾ ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಅಜೆಂಡಾದ ಚಿಂತನೆಯೂ ನಮ್ಮಲ್ಲಿ ಇಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದೆ.

ಸದ್ಯ ಬಿಜೆಪಿ ಸ್ಪಷ್ಟನೆ ನಡುವೆಯೇ ರಾಮಮಂದಿರ ನಿರ್ಮಾಣ ಹೇಳಿಕೆ ಕುರಿತು ಅಸಮಾಧಾನ ಹೊರ ಹಾಕಿರುವ ಎಐಎಂಐಎಂ (ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ) ಪಕ್ಷದ ಮುಖ್ಯಸ್ಥ ಅಸಾದುದ್ದಿನ್ ಓವೈಸಿ, ಸದ್ಯ ರಾಮ ಮಂದಿರ ನಿರ್ಮಾಣದ ಪ್ರಕರಣ ವಿಚಾರಣೆ ಸುಪ್ರೀ ಕೋರ್ಟ್ ನಲ್ಲಿದ್ದು, ಅಮಿತ್ ಶಾ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ. ಅದ್ದರಿಂದ ನ್ಯಾಯೋಚಿತ ಚುನಾವಣೆ ನಡೆಸಲು ಪ್ರಕರಣದ ಕುರಿತ ತೀರ್ಪು ಲೋಕಸಭಾ ಚುನಾವಣೆಗೂ ಬಳಿಕ ಬಂದರೆ ಉತ್ತಮ ಎಂದು ಟ್ವೀಟ್ ಮಾಡಿದ್ದಾರೆ.

ಸದ್ಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಕಪಿಲ್ ಸಿಬಲ್ ಸೇರಿದಂತೆ ಹಲವು ಪಕ್ಷಗಳ ನಾಯಕರು ಸಹ ರಾಮ ಮಂದಿರ ಕುರಿತ ತೀರ್ಪು ಚುನಾವಣೆಯ ಬಳಿಕ ಪ್ರಕಟಗೊಂಡರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇದರ ನಡುವೆಯೇ ಮುಸ್ಲಿಂ ಶಿಯಾ ವಕ್ಫ್ ಬೋರ್ಡ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಬೇಕೇ ಹೊರತು ಮಸೀದಿ ಅಲ್ಲ, ರಾಮ ಮಂದಿರ ವಿವಾದವನ್ನು ಶಾಂತಿಯುವಾಗಿ ಬಗೆಹರಿಸಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗೆ ಶುಕ್ರವಾರ ತಿಳಿಸಿದೆ.

Comments

Leave a Reply

Your email address will not be published. Required fields are marked *