ರಸ್ತೆ ತಡೆ ನಡೆಸಿ ರಾಮನಗರ ರೇಷ್ಮೆ ಬೆಳೆಗಾರರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ರಾಮನಗರ: ಯಾವುದೇ ಸರ್ಕಾರ ಬಂದರೂ ರೈತರಿಗೆ ನೆರವಾಗುತ್ತಿಲ್ಲ ಎಂದು ರಾಮನಗರ ರೇಷ್ಮೆ ಬೆಳೆಗಾರರು ಹೆದ್ದಾರಿ ತಡೆ ಹಿಡಿದು ಪ್ರತಿಭಟನೆ ಮಾಡಿದ್ದಾರೆ.

ರೇಷ್ಮೆ ಗೂಡಿನ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹರಾಜು ಪ್ರಕ್ರಿಯೆನ್ನು ಸ್ಥಗಿತಗೊಳಿಸಿ ರೇಷ್ಮೆ ಬೆಳೆಗಾರರು ಬೆಂಗಳೂರು-ಮೈಸೂರು ಹೆದ್ದಾರಿ ತಡೆಹಿಡಿದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಇಂದು ಹರಾಜು ಪ್ರಕ್ರಿಯೆಯ ವೇಳೆ ರೇಷ್ಮೆಗೂಡಿನ ಬೆಲೆ ಪ್ರತಿ ಕೆಜಿಗೆ ಸರಾಸರಿ 220 ರೂ ರಿಂದ 240 ರೂ ಕ್ಕೆ ನಿಂತಿದೆ. ಯಾವುದೇ ಸರ್ಕಾರ ಬಂದರೂ ರೈತರ ನೆರವಿಗೆ ನಿಲ್ಲುವಂತಹ ಕೆಲಸವಾಗುತ್ತಿಲ್ಲ. ರೈತರ ರೇಷ್ಮೆಯನ್ನು ಸರ್ಕಾರ ತೆಗೆದುಕೊಳ್ಳದಿರುವುದರಿಂದ ಮಧ್ಯವರ್ತಿಗಳು ತಮಗಿಷ್ಟ ಬಂದಂತೆ ಹರಾಜು ಕೂಗುತ್ತಿದ್ದಾರೆ ಎಂದು ರಸ್ತೆ ತಡೆದು ಆಕ್ರೋಶ ಹೊರ ಹಾಕಿದರು.

ನಂತರ ಸ್ಥಳಕ್ಕೆ ಬಂದ ಪೊಲೀಸರು ರೈತರನ್ನು ಮನವೊಲಿಸಿ ಪ್ರತಿಭಟನೆಯನ್ನು ನಿಲ್ಲಿಸಿದರು. ಈ ನಡುವೆ ಅಧಿಕಾರಿಗಳು ಹಾಗೂ ರೈತರ ನಡುವೆ ಮಾತುಕತೆ ನಡೆದು ಅಧಿಕಾರಿಗಳು ಮತ್ತೆ ಉತ್ತಮ ಬೆಲೆಗೆ ಹರಾಜು ನಡೆಸುವ ಭರವಸೆ ನೀಡಿದರು.

Comments

Leave a Reply

Your email address will not be published. Required fields are marked *