ಭಿಕ್ಷೆ ಬೇಡುವ ನೆಪದಲ್ಲಿ ಮಕ್ಕಳಿಗೆ ಕಳ್ಳತನದ ಟ್ರೈನಿಂಗ್

ರಾಮನಗರ: ಜಿಲ್ಲೆಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮಕ್ಕಳನ್ನು ಮುಂದಿಟ್ಟುಕೊಂಡು ಕಳ್ಳತನ ಮಾಡಿಸುತ್ತಿದ್ದ ಗ್ಯಾಂಗ್‍ನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರ್ಗಿ ಜಿಲ್ಲೆಯ ಸಂಜನಾ ಹಾಗೂ ಮೀನಾಕ್ಷಿ ಬಂಧಿತರು. ದೊಡ್ಡ ದೊಡ್ಡ ಅಂಗಡಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ ಕ್ಷಣ ಮಾತ್ರದಲ್ಲಿ ಗಲ್ಲ ಪೆಟ್ಟಿಗೆಯಲ್ಲಿದ್ದ ಹಣವನ್ನ ಲಪಟಾಯಿಸುತ್ತಿದ್ದರು. ಕದ್ದ ಹಣವನ್ನ ತಾವು ತಂದಿದ್ದ ಬಿರಿಯಾನಿ ಪೊಟ್ಟಣದಲ್ಲಿ ಅಡಗಿಸಿಟ್ಟುಕೊಳ್ಳುತ್ತಿದ್ದರು. ಮಕ್ಕಳಿಗೂ ಇದೇ ರೀತಿ ಕಳ್ಳತನದ ಟ್ರೈನಿಂಗ್ ನೀಡುತ್ತಿದ್ದ ಖತರ್ನಾಕ್ ಮಹಿಳೆಯರ ಬಂಧನವಾಗಿದೆ.

ರಾಮನಗರದ ಐಜೂರು ಪೊಲೀಸರು ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 8ಕ್ಕೂ ಹೆಚ್ಚು ಜನರಿದ್ದ ಗ್ಯಾಂಗ್‍ನಲ್ಲಿ ಪ್ರತಿಯೊಬ್ಬರ ಬಳಿಯೂ ಹಸುಗೂಸುಗಳಿದ್ದು, 2 ತಿಂಗಳ ಹಿಂದಷ್ಟೇ ರಾಮನಗರಕ್ಕೆ ಈ ಖತರ್ನಾಕ್ ಗ್ಯಾಂಗ್ ಕಾಲಿಟ್ಟಿದೆ. ಇವರ ಕೃತ್ಯ ಸಿಸಿಟಿವಿಯಲ್ಲೂ ಸೆರೆಸಿಕ್ಕಿದೆ.

Comments

Leave a Reply

Your email address will not be published. Required fields are marked *