ಅಕ್ಟೋಬರ್ 2ನೇ ವಾರದಲ್ಲಿ ಯಡಿಯೂರಪ್ಪಗೆ ಮಹಾಯೋಗ -ಭವಿಷ್ಯ ನುಡಿದ ರಂಭಾಪುರಿ ಶ್ರೀಗಳು

ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರ ಜಾತಕದಲ್ಲಿ ಅಕ್ಟೋಬರ್ ಎರಡನೇ ವಾರದಲ್ಲಿ ಮಹಾಯೋಗ ಇದೆ ಅಂತ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಈ ಭವಿಷ್ಯವಾಣಿ ನುಡಿದಿದ್ದಾರೆ. ಅಕ್ಟೋಬರ್ ಎರಡನೇ ವಾರದಲ್ಲಿ ಯಡಿಯೂರಪ್ಪರ ಜಾತಕದಲ್ಲಿ ಮಹಾಯೋಗ ಇದೆ. ಈ ಮಹಾಯೋಗದ ಪ್ರಕಾರ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಅಕ್ಟೋಬರ್ ಎರಡನೇ ವಾರದ ಅಪೂರ್ವ ಘಟ್ಟದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಯೋಗ ಇದೆ ಎಂದರು. ಶ್ರೀಗಳಿಂದ ಹಿತನುಡಿ ಹೊರಬರುತಿದ್ದಂತೆ ಸಮಾರಂಭದಲ್ಲಿ ನೆರೆದವರು ಚಪ್ಪಾಳೆ ಸುರಿಮಳೆಗೈದಿದ್ದಾರೆ.

Comments

Leave a Reply

Your email address will not be published. Required fields are marked *