ದೇವಿಯ ಮೇಲೆ ಮುನಿಸಿಕೊಂಡ್ರಾ ರಮೇಶ್ ಜಾರಕಿಹೊಳಿ?

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮನ್ನು ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನೆಲೆ ಕಳೆದೆರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಪಕ್ಷದವರ ಮೇಲಷ್ಟೆ ಅಲ್ಲದೆ ತನ್ನ ಆರಾಧ್ಯ ಧೈವ ಕೊಲ್ಲಾಪುರ ಮಹಾಲಕ್ಷ್ಮಿ ಮೇಲೂ ಮುನಿಸಿಕೊಂಡಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಪ್ರತಿ ಶುಕ್ರವಾರ ತಪ್ಪದೇ ಕೊಲ್ಲಾಪುರಕ್ಕೆ ತೆರಳಿ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆಯುತ್ತಿದ್ದರು. ಇಂದು ದೇವಿಯ ದರ್ಶನ ಪಡೆಯಲು ಸಹ ಕೊಲ್ಲಾಪುರಕ್ಕೆ ತೆರಳದೇ ಅಜ್ಞಾತ ಸ್ಥಳದಲ್ಲಿಯೇ ಉಳಿದುಕೊಂಡಿದ್ದಾರೆ.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಭಾಜಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡಿದ್ದವು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಎಲ್ಲಿಯೂ ಹೋಗಿಲ್ಲ, ಬೆಳಗಾವಿಯಲ್ಲಿದ್ದಾರೆ. ಸಚಿವ ಸಂಪುಟದಿಂದ ಅವರನ್ನು ಕೈ ಬಿಟ್ಟಿದ್ದರಿಂದ ಅಸಮಾಧಾನಗೊಂಡಿದ್ದಾರೆ. ನಾನು ಫೋನ್ ನಲ್ಲಿ ಅವರ ಜೊತೆ ಮಾತನಾಡಿದ್ದೇನೆ. ರಮೇಶ್ ಓರ್ವ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಪಕ್ಷ ತೊರೆಯಲ್ಲ ಎಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *