ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ್ರೆ ಅತ್ಯಾಚಾರ ಪ್ರಕರಣ ಬಯಲಾಯ್ತು!

ಉಡುಪಿ: ಯುವತಿಯ ಮೇಲೆ ಅತ್ಯಾಚಾರ ನಡೆದ ವಿಚಾರ ಎಂಟು ತಿಂಗಳ ನಂತರ ಬೆಳಕಿಗೆ ಬಂದಿರುವ ಪ್ರಕರಣ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ಯಾಚಾರಕ್ಕೊಳಗಾದ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಯುವತಿಯನ್ನು ಕೂಡಲೇ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ನೀಡಿದ ವೈದ್ಯರು ಯುವತಿ ಗರ್ಭವತಿಯಾಗಿರುವುದನ್ನು ಮನೆಯವರಿಗೆ ತಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಯುವತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಕುಟುಂಬಸ್ಥರು ವಿಚಾರಣೆ ಮಾಡಿದಾಗ 8 ತಿಂಗಳ ಹಿಂದೆ ಭಾಸ್ಕರ್ ಆಚಾರಿ ಎಂಬ ವ್ಯಕ್ತಿ ಅತ್ಯಾಚಾರ ನಡೆಸಿದ್ದಾಗಿ ಯುವತಿ ಹೇಳಿದ್ದಾರೆ. ಮನೆ ಕೆಲಸಕ್ಕೆ ಬರುತ್ತಿದ್ದ ಭಾಸ್ಕರ್ ಯುವತಿಯನ್ನ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿದ್ದು, ಇದನ್ನು ಮನೆಯವರಲ್ಲಿ ಹೇಳದಂತೆ ಜೀವಬೆದರಿಕೆ ಹಾಕಿದ್ದ.

ಮಗುವಿಗೆ ಜನ್ಮ ನೀಡಿದ ನಂತರ ಕುಟುಂಬಸ್ಥರು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಭಾಸ್ಕರ್ ಆಚಾರಿಯನ್ನು ಗೌಪ್ಯವಾಗಿ ಕರೆಸಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆಯಲ್ಲಿ ತಾನು ಅತ್ಯಾಚಾರ ಮಾಡಿರುವುದಾಗಿ ಭಾಸ್ಕರ್ ಒಪ್ಪಿಕೊಂಡಿದ್ದಾನೆ.

 

Comments

Leave a Reply

Your email address will not be published. Required fields are marked *