ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ

ತಿರುವನಂತಪುರಂ: ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕೆ ನಾನು ಸ್ವಾಮೀಜಿಯ ಮರ್ಮಾಂಗವನ್ನೇ ಕತ್ತರಿಸಿದ್ದೇನೆ ಎಂದು ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದರೆ, ಸ್ವಾಮೀಜಿ ಮಾತ್ರ ಇದಕ್ಕೆ ತದ್ವಿರುದ್ಧವಾದ ಹೇಳಿಕೆ ನೀಡಿದ್ದಾನೆ.

ಶ್ರೀಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿಯನ್ನು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಆತ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದ್ದೇನೆ. ಯುವತಿ ಸುಳ್ಳು ಹೇಳುತ್ತಿದ್ದಾಳೆ. ಆಕೆಯ ಮಾತನ್ನು ನಂಬಬೇಡಿ. ಸುಳ್ಳು ವರದಿಯನ್ನು ಪ್ರಸಾರ ಮಾಡಬೇಡಿ ಎಂದು ಹೇಳಿದ್ದಾನೆ.

ಈ ಘಟನೆಯ ಬಗ್ಗೆ ಕೇರಳ ಮುಖ್ಯಮಮತ್ರಿ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿ ಯುವತಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. ಹುಡುಗಿಯ ಉತ್ತಮವಾದ ಕೆಲಸವನ್ನೇ ಮಾಡಿದ್ದಾಳೆ ಎಂದು ಹೊಗಳಿದ್ದಾರೆ.

23 ವರ್ಷದ ಕಾನೂನು ವಿದ್ಯಾರ್ಥಿನಿ ಶುಕ್ರವಾರ ರಾತ್ರಿ ಅತ್ಯಾಚಾರಕ್ಕೆ ಯತ್ನಿಸಿದ ಸ್ವಾಮೀಜಿ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ್ದಳು. ತನ್ನ ಕೃತ್ಯದ ಬಳಿಕ ತಿರುವನಂತಪುರಂ ಪೊಲೀಸ್ ಠಾಣೆಗೆ ಕರೆ ಮಾಡಿ ತನ್ನ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಳು.

ಈ ಪ್ರಕರಣದ ಸಂಬಂಧ ಯುವತಿಯ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಪೊಲೀಸರಿಗೆ ನೀಡಿದ ಹೇಳಿಕೆಯನ್ನು ಸ್ವಾಮೀಜಿ ನನ್ನ ಮೇಲೆ ಎಸಗುತ್ತಿದ್ದ ಕೃತ್ಯ ನನ್ನ ತಾಯಿಗೂ ತಿಳಿದಿತ್ತು ಎಂದು ಯುವತಿ ಹೇಳಿಕೆ ನೀಡಿದ್ದಳು.

ಇದೇ ವೇಳೆ ಯುವತಿಯ ವಿರುದ್ಧ ಯಾವುದೇ ಕೇಸ್ ದಾಖಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ವಾಮೀಜಿಯ ಮರ್ಮಾಂಗವನ್ನೇ ಕತ್ತರಿಸಿದ ಕಾನೂನು ವಿದ್ಯಾರ್ಥಿನಿ.. ಏನಿದು ಘಟನೆ?

Comments

Leave a Reply

Your email address will not be published. Required fields are marked *