ಅಂಬರೀಶ್, ನಾನು ಅಣ್ಣ-ತಮ್ಮಂದಿರಿದ್ದಂತೆ: ಕುಮಾರಸ್ವಾಮಿ

ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಾನು ಸಹೋದರರಿದ್ದಂತೆ. ರಾಜ್ಯ ರೈತರ ಹಿತದದೃಷ್ಟಿಯಿಂದ ಅಂಬರೀಶ್ ಅವರು ನಮ್ಮ ಪಕ್ಷಕ್ಕೆ ಬೆಂಬಲಕೊಟ್ಟರೆ ಸಂಪೂರ್ಣ ಸ್ವಾಗತವಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮದ್ದೂರಿನಲ್ಲಿ ಮಾತನಾಡಿದ ಅವರು, ಅಂಬರೀಶ್ ಅವರಿಗೆ ದೇವೇಗೌಡರ ಜೊತೆ ಉತ್ತಮ ಬಾಂಧವ್ಯ ಹಾಗೂ ಗೌರವ ಇದೆ. ರಾಜ್ಯದಲ್ಲಿ ಒಳ್ಳೆಯ ಸರ್ಕಾರ ತರುವ ದೃಷ್ಟಿಯಿಂದ ಅಂಬರೀಶ್ ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ನಮ್ಮ ಕಡೆಯಿಂದ ಸ್ವಾಗತವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಪ ಜನರಿಗೆ ನ್ಯಾಯ ದೊರಕಿಸಿಕೊಡಲು ಆಗಲ್ಲ ಅಂತ ಹಿಂದೆ ಸರಿದಿದ್ದಾರೆ- ಅಂಬಿಯನ್ನು ಹಾಡಿಹೊಗಳಿದ ಡಿಕೆಶಿ

ಅಂಬರೀಶ್ ಅವರು ನಾನು ಅಣ್ಣ ತಮ್ಮಂದಿರಿದ್ದ ಹಾಗೆ. ಅವರು ಯಾವುದೇ ಪಕ್ಷದಲ್ಲಿದ್ದರೂ ಅಜಾತಶತ್ರು. ಅವರು ಎಲ್ಲರ ಜೊತೆ ಸ್ನೇಹ ಜೀವಿಯಾಗಿರಬೇಕೆಂದು ಬಯಸುತ್ತಾರೆ. ಅವರು ಕಾಂಗ್ರೆಸ್ ಜೊತೆಯಲ್ಲಿದ್ದರು ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ರಾಜ್ಯ ಮತ್ತು ರೈತರ ಹಿತದೃಷ್ಟಿಯಿಂದ ಅಂಬರೀಶ್ ಅವರು ನಮ್ಮ ಪಕ್ಷಕ್ಕೆ ಬೆಂಬಲ ಕೊಟ್ಟರೆ ಸಂಪೂರ್ಣ ಸ್ವಾಗತವಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *