ರೆಬಲ್ ಸ್ಟಾರ್ ಅಂಬರೀಶ್ ಇನ್ನಿಲ್ಲ

ಬೆಂಗಳೂರು: ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

ಮಂಡ್ಯ ಬಸ್ ದುರಂತ ಘಟನೆಯ ಬಳಿಕ ಸುಸ್ತಾಗಿದ್ದ ಅಂಬರೀಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅಂಬರೀಶ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಭಾನುವಾರ ಇಡೀ ದಿನ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಇರಿಸಲಾಗುತ್ತಿದೆ. ಅಂತಿಮ‌ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಗೊಳಿಸಲಾಗಿದೆ.

ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *