ರಾಡ್ ಬಳಸಿ ಡೋರ್ ಒಡೆದು ಕಳ್ಳರ ಕೈಚಳಕ

ಆನೇಕಲ್: ರಸ್ತೆ ಬದಿಯಲ್ಲಿರುವ ಮೆಡಿಕಲ್ ಶಾಪ್ ಹಾಗೂ ಪ್ರಾವಿಜನ್ ಸ್ಟೋರ್ ಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕು ನಂದಗುಡಿಯಲ್ಲಿ ನಡೆದಿದೆ.

ನಗರದ ಗಾಂಧಿ ಸರ್ಕಲ್ ಮತ್ತು ಕೆನರಾ ಬ್ಯಾಂಕ್ ಎಟಿಮ್ ಪಕ್ಕದಲ್ಲಿ ಇರುವ ಮಧು ಮೆಡಿಕಲ್ಸ್ ಮತ್ತು ಪ್ರಾವಿಜನ್ ಸ್ಟೋರ್ ನಲ್ಲಿ ಮಂಗಳವಾರ ನಸುಕಿನ ಜಾವ 2.30 ರ ವೇಳೆ ಕಾರಿನಲ್ಲಿ ಬಂದ ನಾಲ್ವರು ಕಳ್ಳರು ರಾಡ್ ಸಹಾಯದಿಂದ ಡೋರ್ ಒಡೆದು ಒಳನುಗ್ಗಿದ್ದಾರೆ. ಬಳಿಕ ಕ್ಯಾಶ್ ಬಾಕ್ಸ್ ನಲ್ಲಿ ಇದ್ದ ಸುಮಾರು 25 ಸಾವಿರ ರೂ. ನಗದು ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಮುಂಜಾನೆ ಪೇಪರ್ ಹಾಕುವ ಹುಡುಗರು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ನಂದಗುಡಿ ಪೊಲೀಸರು ಪರಿಶೀಲನೆ ನಡೆಸಿ, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *