ಸಿಡ್ನಿ ಟೆಸ್ಟ್‌ ಬಳಿಕ ರೋಹಿತ್‌ ಗುಡ್‌ಬೈ? – ಹಿಂಟ್‌ ಕೊಟ್ಟ ರವಿ ಶಾಸ್ತ್ರಿ

– ಆಸ್ಟ್ರೇಲಿಯಾ ಮಾಧ್ಯಮಗಳಿಂದ ರೋಹಿತ್‌ – ಕೊಹ್ಲಿಗೆ ಅವಮಾನ

ಮೆಲ್ಬೋರ್ನ್‌: ಸದ್ಯ ನಡೆಯುತ್ತಿರುವ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಈ ನಡುವೆ ಸರಣಿಯಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಾರೆ ಅನ್ನೋ ವದಂತಿ ಎದ್ದಿದೆ.

ಬಿಜಿಟಿ ಸರಣಿಯಲ್ಲಿ ನಿರಂತರ ವೈಫಲ್ಯ ಕಂಡಿರುವ ರೋಹಿತ್‌ ಶರ್ಮಾ, ಟೆಸ್ಟ್‌ ನಾಯಕತ್ವ ತ್ಯಜಿಸಬೇಕು ಎಂಬ ಆಗ್ರಹ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಭಾರತದ ತಂಡದ ಮಾಜಿ ಮುಖ್ಯ ಕೋಚ್‌ ರವಿ ಶಾಸ್ತ್ರಿ, ಬಿಜಿಟಿ ಟೆಸ್ಟ್‌ ಸರಣಿ ಬಳಿಕ ರೋಹಿತ್‌ ಶರ್ಮಾ ನಿವೃತ್ತಿಯಾಗುವ ಬಗ್ಗೆ ದೃಢ ನಿರ್ಧಾರ ತಾಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಆಸ್ಟ್ರೇಲಿಯಾಗೆ 184 ರನ್‌ಗಳ ಭರ್ಜರಿ ಗೆಲುವು

ರೋಹಿತ್‌ ಶರ್ಮಾ ತಮ್ಮ ಟೆಸ್ಟ್‌ ನಾಯಕತ್ವ ತ್ಯಜಿಸುವ ಕುರಿತು ಯೋಚಿಸಬೇಕಾದ ಸಮಯ ಬಂದಿದೆ. ಬಿಜಿಟಿ ಬಳಿಕ ಈ ಕುರಿತು ಅವರು ಸೂಕ್ತ ತೀರ್ಮಾನ ಮಾಡಲಿದ್ದಾರೆ ಎಂಬ ಭರವಸೆ ಇದೆ. ಟೆಸ್ಟ್‌ ಪಂದ್ಯಾವಳಿಯಲ್ಲಿ ತಮ್ಮ ಪ್ರದರ್ಶನದ ಕುರಿತು ರೋಹಿತ್‌ ಗಂಭೀರವಾಗಿ ಚಿಂತಿಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್‌ ವಿರುದ್ಧ ರೋಚಕ ಜಯ – WTC ಫೈನಲ್‌ಗೆ ದ.ಆಫ್ರಿಕಾ, ಭಾರತಕ್ಕೆ ಗೆಲುವೊಂದೇ ದಾರಿ

ರೋಹಿತ್ ಶರ್ಮಾ ಅವರ ಅಲ್ಟ್ರಾ-ಡಿಫೆನ್ಸಿವ್ ವಿಧಾನ ಮತ್ತೆ ಮತ್ತೆ ಕೈಕೊಡುತ್ತಿದೆ. ಸತತ ಬ್ಯಾಟಿಂಗ್‌ ವೈಫಲ್ಯ ಅವರ ನಾಯಕತ್ವದ ಮೇಲೂ ಪರಿಣಾಮ ಬೀರುತ್ತಿದೆ. ಇದು ಟೆಸ್ಟ್‌ ಪಂದ್ಯಾವಳಿಯಿಂದ ರೋಹಿತ್‌ ನಿವೃತ್ತಿ ಹೊಂದುವ ಸಮಯ. ಆದರೆ ಈ ಕುರಿತು ಅವರೇ ನಿರ್ಧಾರ ಕೈಗೊಳ್ಳಬೇಕು ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಇದನ್ನೂ ಓದಿ: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ – ರೇಸ್‌ನಲ್ಲಿರುವ ನಾಲ್ವರ ಪೈಕಿ ಭಾರತದ ಅರ್ಷ್‌ದೀಪ್‌ಗೆ ಸ್ಥಾನ!

ಆಸ್ಟ್ರೇಲಿಯಾ ಮಾಧ್ಯಮಗಳಿಂದ ರೋ-ಕೊಗೆ ಅವಮಾನ:
ಆಸ್ಟ್ರೇಲಿಯಾದ ಸ್ಥಳೀಯ ಮಾಧ್ಯಮಗಳು ಭಾರತ ತಂಡದ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರನ್ನ ಟಾರ್ಗೆಟ್‌ ಮಾಡಿದಂತೆ ಕಾಣುತ್ತಿದೆ. 19ರ ಹರೆಯದ ಆಟಗಾರ ಸ್ಯಾಮ್‌ ಕಾನ್‌ಸ್ಟಾಸ್‌ ಫೋಟೋ ಜೊತೆ ʻವಿರಾಟ್‌ ಐ ಆಮ್‌ ಯುವರ್ ಡ್ಯಾಡ್‌ʼ (ನಾನು ನಿಮ್ಮ ಅಪ್ಪ) ಎಂಬ ಶೀರ್ಷಿಕೆ ನೀಡಿದ್ದು, ತೀರಾ ಕೆಳಮಟ್ಟದ ವರ್ತನೆಯನ್ನು ತೋರಿವೆ. ಈ ಬೆನ್ನಲ್ಲೇ ನಾಯಕ ರೋಹಿತ್‌ ಶರ್ಮಾ ಅವರ ಭಾವಚಿತ್ರಕ್ಕೆ ʻಕ್ರೈ ಬೇಬಿʼ ಎಂದು ಬರೆದು ಅಪಮಾನ ಮಾಡಿವೆ. ಇದರಿಂದ ಆಸ್ಟ್ರೇಲಿಯಾ ಮಾಧ್ಯಮಗಳ ವಿರುದ್ಧ ಟೀಂ ಇಂಡಿಯಾ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಏನಿದು ಘಟನೆ?
ಮೆಲ್ಬೋರ್ನ್‌ 4ನೇ ಟೆಸ್ಟ್‌ನ ಮೊದಲ ದಿನ ಅಬ್ಬರದ ಆಟವಾಡುತ್ತಿದ್ದ ಆಸ್ಟ್ರೇಲಿಯಾದ 19 ವರ್ಷದ ಯುವ ಬ್ಯಾಟರ್‌ ಸ್ಯಾಮ್‌ ಕಾನ್‌ಸ್ಟಾಸ್‌ ಅವರಿಗೆ ವಿರಾಟ್‌ ಕೊಹ್ಲಿ ಭುಜಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿತ್ತು. 10ನೇ ಓವರ್‌ ವೇಳೆ ಕ್ರೀಸ್‌ ಬಳಿ ಕಾನ್‌ಸ್ಟಾಸ್‌ ನಡೆದುಕೊಂಡು ಹೋಗುತ್ತಿದ್ದಾಗ ಕೊಹ್ಲಿ ಭುಜ ತಾಗಿಸಿದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಕೊಹ್ಲಿ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಐಸಿಸಿ ಪಂದ್ಯದ ಸಂಭಾವನೆಯ ಶೇಕಡಾ 20ರಷ್ಟು ದಂಡ ವಿಧಿಸಿತ್ತು.