ರಾಯಚೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ

ರಾಯಚೂರು: ರೌಡಿಶೀಟರ್ ಓರ್ವನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ಗೇಟ್ ಲಕ್ಷ್ಮಣ(42) ಕೊಲೆಯಾಗಿರುವ ರೌಡಿಶೀಟರ್. ನಗರದ ಕುಲಸುಂಬಿ ಕಾಲೋನಿ ನಿವಾಸಿಯಾಗಿರುವ ಲಕ್ಷ್ಮಣನನ್ನು ಮೂರು ಜನ ಯುವಕರು ಮಚ್ಚು ಲಾಂಗ್‍ಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ಹಾಗೂ ಕೊಲೆ ಆರೋಪಿಗಳ ಗುರುತು ಪತ್ತೆಯಾಗಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವೇದಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಗೇಟ್ ಲಕ್ಷ್ಮಣ ವಿರುದ್ಧ ಪಶ್ಚಿಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲೇ ಹಲವಾರು ಪ್ರಕರಣಗಳನ್ನ ಎದುರಿಸುತ್ತಿದ್ದನು.

ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

Comments

Leave a Reply

Your email address will not be published. Required fields are marked *