ಬೆಂಗ್ಳೂರಿನ ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಒಳಗೆ ಸಿಕ್ತು ಕೋಟಿ ಕೋಟಿ ನಿಧಿ

ಬೆಂಗಳೂರು: ನಗರದ ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಕ್ಲಾಬ್ ಒಳಗೆ ಕೋಟಿ ಕೋಟಿ ನಿಧಿ ಸಿಕ್ಕಿದೆ.

ಅವಿನಾಶ್ ಅಮರ್ ಲಾಲ್ ಎಂಬ ಉದ್ಯಮಿ ಟೆನಿಸ್ ಕೋರ್ಟ್ ನಲ್ಲಿ ಕಳೆದ 1 ವರ್ಷದಿಂದ ನಿಧಿಯನ್ನು ಬಚ್ಚಿಟ್ಟಿದ್ದನು. ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಆಡಳಿತ ಮಂಡಳಿ ಆತ ಬಚ್ಚಿಟ್ಟಿದ್ದ ಲಾಕರ್ ಓಪನ್ ಮಾಡಿದ್ದಾರೆ. ಆಗ 2 ಲಾಕರ್ ಓಪನ್ ಮಾಡಿದಾಗ ಅದರಲ್ಲಿ 2 ಬ್ಯಾಗ್ ಪತ್ತೆಯಾಗಿದೆ. 2 ಬ್ಯಾಗಿನಲ್ಲಿ ಸುಮಾರು 3.90 ಕೋಟಿ ನಗದು, 5 ಕೋಟಿ ಮೌಲ್ಯದ ವಜ್ರಾಭರಣ ಮತ್ತು 100ಕೋಟಿ ರೂ. ಆಸ್ತಿ ಪತ್ರ ಪತ್ತೆಯಾಗಿದೆ.

ಬೌರಿಂಗ್ ಆಡಳಿತ ಮಂಡಳಿ ಲಾಕರ್ ಓಪನ್ ಮಾಡಿ ಗಾಬರಿಯಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಬೌರಿಂಗ್ ಕ್ಲಬ್ ಸೆಕ್ರೆಟರಿ ಶ್ರೀಕಾಂತ್ ಮತ್ತು ಬ್ಯಾಡ್ಮಿಂಟನ್ ಕಮಿಟಿಯ ಸಂದೀಪ್‍ಗೆ ಉದ್ಯಮಿ ಆಮಿಷ ಒಡ್ಡಿದ್ದಾನೆ. ಹಣ ಮತ್ತು ವಜ್ರಾಭರಣ ನೀವೆ ಇಟ್ಟುಕೊಳ್ಳಿ. ಆದರೆ ಆಸ್ತಿ ಪತ್ರ ಮಾತ್ರ ಕೊಡಿ ಎಂದು ಆಮಿಷ ಒಡ್ಡಿದ್ದಾನೆ. ಆದರೆ ಉದ್ಯಮಿಯ ಆಮಿಷಕ್ಕೆ ಒಳಗಾಗದ ಬೌರಿಂಗ್ ಆಡಳಿತ ಮಂಡಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಮತ್ತು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಗುರುವಾರ ರಾತ್ರಿ 12 ಗಂಟೆವರೆಗೂ ಐಟಿ ಇಲಾಖೆ ಪರೀಶಿಲನೆ ನಡೆಸಿದ್ದಾರೆ.

ಸಿಕ್ಕಿಬಿದ್ದಿದ್ದು ಹೇಗೆ?
ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಆಡಳಿತ ಮಂಡಳಿ 15 ದಿನಗಳ ಹಿಂದೆ, ನೀವು ಲಾಕರ್ ನಲ್ಲಿ ಇಟ್ಟಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಹೋಗಿ ಒಂದು ವೇಳೆ ಲಾಕರ್ ನಲ್ಲಿರುವ ವಸ್ತುವನ್ನು ಕೊಂಡೊಯ್ಯದಿದ್ದರೆ ಲಾಕರ್ ಒಡೆಯುದಾಗಿ ಉದ್ಯಮಿಗೆ ನೋಟಿಸ್ ಕಳುಹಿಸಿದ್ದಾರೆ. ಸ್ವಲ್ಪ ಕೆಲಸ ಕಾರ್ಯಗಳಿವೆ. ಆದ್ದರಿಂದ ಅವುಗಳನ್ನು ಒಡೆದು ನವೀಕರಣಗೊಳಿಸಬೇಕಿದೆ ಎಂದು ಬೌರಿಂಗ್ ಆಡಳಿತ ಮಂಡಳಿ ತಿಳಿಸಿದೆ. ಆದರೆ ಉದ್ಯಮಿ ನೋಟಿಸ್ ಬಗ್ಗೆ ತಲೆ ತಲೆಕೆಸಿಕೊಂಡಿಲ್ಲ. ಕೊನೆಗೆ ಆಡಳಿತ ಮಂಡಳಿ 86, 87ರಲ್ಲಿ ಲಾಕರ್ ಹೊಡೆದಿದೆ. ಆಗ ಈ ಕೋಟಿ ಕೋಟಿ ಆಸ್ತಿ ಪತ್ತೆಯಾಗಿದೆ.

ಅವಿನಾಶ್ ಅಮರ್ ಲಾಲ್ ಪ್ರೆಸ್ಟಿಜ್ ಗ್ರೂಪ್ ಆಫ್ ಕಂಪೆನಿಯಲ್ಲಿ ಪಾಲುದಾರನಾಗಿದ್ದು, ಮೂಲತಃ ರಾಜಸ್ಥಾನದವನು ಎಂದು ತಿಳಿದು ಬಂದಿದೆ. ಜೊತೆಗೆ ಬೆಂಗಳೂರಲ್ಲಿ ಬಡ್ಡಿ ವ್ಯವಹಾರ ಮಾಡುತ್ತಿದ್ದು, 30% ರಷ್ಟು ಬಡ್ಡಿಗೆ ಸಾಲ ನೀಡುತ್ತಿದ್ದನು. ಸಾಲ ಕೊಟ್ಟು ಆಸ್ತಿ ಪತ್ರಗಳನ್ನು ಪಡೆಯುತ್ತಿದ್ದನು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಈ ಬಗ್ಗೆ ಐಟಿ ಇಲಾಖೆ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *