RSS ಭಾರತವನ್ನ ಮಾದರಿ ಸಮಾಜವಾಗಿ ರೂಪಿಸಲು ಶ್ರಮಿಸುತ್ತಿದೆ: ಮೋಹನ್ ಭಾಗವತ್

ನವದೆಹಲಿ: ಸಮಾಜವನ್ನೂ ಜಾಗೃತಗೊಳಿಸಲು ಹಾಗೂ ಒಗ್ಗೂಡಿಸಲು ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಶ್ರಮಿಸುತ್ತಿದ್ದು, ಇದರಿಂದ ಇಡೀ ವಿಶ್ವಕ್ಕೆ ಭಾರತ ಮಾದರಿ ಸಮಾಜವಾಗಿ ನಿಲ್ಲಲು ಸಾಧ್ಯವಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಆರ್‌ಎಸ್‌ಎಸ್‌ನ ದೆಹಲಿ ಘಟಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರು ಸಮಾಜ ಸೇವೆ ಮಾಡಲು ಒಂದು ಸಮುದಾಯವಾಗಿ ಬರಬೇಕೆ ಹೊರತು ಒಬ್ಬ ವ್ಯಕ್ತಿಯಾಗಿ ಅಲ್ಲ. ಹಾಗಾಗಿಯೇ ಸಂಘವು ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ನದಿ, ಕೆರೆಗಳಲ್ಲಿ ಸ್ನಾನ ಮಾಡೋ ಮುನ್ನ ಹುಷಾರ್ – ವಿದೇಶದಲ್ಲಿ ಪತ್ತೆಯಾಗಿದೆ ಮೆದುಳು ತಿನ್ನುವ ಡೆಡ್ಲಿ ವೈರಸ್

ನಮ್ಮ ಸಮಾಜದ ವಿವಿಧ ವರ್ಗಗಳ ಅನೇಕ ವ್ಯಕ್ತಿಗಳು ದೇಶದ ಸ್ವಾತಂತ್ರ‍್ಯಕ್ಕಾಗಿ ತ್ಯಾಗ ಬಲಿದಾನದ ಜತೆಗೆ ಕೊಡುಗೆ ನೀಡಿದ್ದಾರೆ. ಆದರೆ ನಾವು ಒಂದು ಸಮಾಜವಾಗಿ ಒಗ್ಗೂಡಿ ಮುಂಚೂಣಿಗೆ ಬರಲು ಸಮಯ ಹಿಡಿಯಿತು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಮಾಜಮುಖಿಯಾಗಿ ಚಿಂತನೆ ನಡೆಸುವಂಥದ್ದು ಭಾರತೀಯರ ಮೂಲ ಸ್ವಭಾವ. ಇದು ಅವರ ಡಿಎನ್‌ಎಯಲ್ಲೇ ಬಂದಿದೆ. ಇಂಥ ಗುಣಗಳನ್ನು ನಾವು ಪ್ರೋತ್ಸಾಹಿಸಬೇಕು. ಅಂತೆಯೇ ಆರ್‌ಎಸ್‌ಎಸ್‌ನ ಕಾರ್ಯಕರ್ತರು ತಮ್ಮ ವೈಯಕ್ತಿಕ ಹಿತಾಸಕ್ತಿಗಳತ್ತ ಗಮನ ಕೊಡದೇ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದೂ ಸಲಹೆ ನೀಡಿದರು. ಇದನ್ನೂ ಓದಿ: Paytm ಮುಖ್ಯಸ್ಥರಾಗಿ ವಿಜಯ್ ಶೇಖರ್ ಮರುನೇಮಕ

ಯಾವುದೇ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡುವಾಗ ಕಾರ್ಯಕರ್ತರು, ನಾನು ಮತ್ತು ನನ್ನದು ಎಂಬುದಕ್ಕಿಂತ ನಮಗೆ, ನಮ್ಮದು ಎನ್ನುವುದಕ್ಕೆ ಆದ್ಯತೆ ನೀಡಬೇಕು. ಇದು ಸಮಾಜವು ವಿಕಾಸಗೊಳ್ಳಲು ಸಹಾಯ ಮಾಡುತ್ತದೆ ಎಂದೂ ಭಾಗವತ್ ತಿಳಿವಳಿಕೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *