ಕೊಪ್ಪಳದಲ್ಲಿ ಎಗ್ಗಿಲ್ಲದೇ ಸಾಗುತ್ತಿದೆ ಆರ್ ಟಿಓ ಅಧಿಕಾರಿಗಳ ಹಗಲು ದರೋಡೆ!

ಕೊಪ್ಪಳ: ಕೂಕನಪಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಪಾಸಣೆ ನೆಪದಲ್ಲಿ ಆರ್ ಟಿಓ ಅಧಿಕಾರಿಗಳು ಹಗಲು ದರೋಡೆ ನಡೆಸುತ್ತಿದ್ದಾರೆ.

ಕೊಪ್ಪಳ ತಾಲೂಕಿನ ಕೂಕನಪಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಆರ್ ಟಿಒ ಅಧಿಕಾರಿಗಳು ತಪಾಸಣೆ ನೆಪದಲ್ಲಿ ಲೂಟಿ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಗಂಭೀರವಾಗಿ ಕೇಳಿಬರುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರತಿಯೊಂದು ಲಾರಿಗಳನ್ನು ನಿಲ್ಲಿಸಿ ದಾಖಲಾತಿ ತಪಾಸಣೆ ನೆಪದಲ್ಲಿ ಚಾಲಕರಿಂದ ರಾಜಾರೋಷವಾಗಿ ಹಣ ಲೂಟಿ ಮಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿವೆ.

ಆರ್ ಟಿಓ ಅಧಿಕಾರಿಗಳು ಎಲ್ಲಾ ದಾಖಲೆ ಸರಿ ಇದ್ದರೂ ಪ್ರತಿಯೊಬ್ಬ ಚಾಲಕ ಹಣ ಕೊಟ್ಟು ಹೋಗಬೇಕು ಎಂಬ ಅಲಿಖಿತ ನಿಯಮ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಹಣ ಕೊಡುವುದಕ್ಕೆ ನಿರಾಕರಿಸುವ ಲಾರಿ ಚಾಲಕರ ವಿರುದ್ಧ ಇಲ್ಲ ಸಲ್ಲದ ಪ್ರಕರಣ ದಾಖಲಿಸಿ ತೊಂದರೆ ನೀಡುತ್ತಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *