ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖರಕಾಯ್, ಕೀವ್‍ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ ಅಂತ ಹೇಳಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.

ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ ಜಲಜೀವನ್ ಮಿಷನ್ ಕುರಿತು ದಕ್ಷಿಣ ರಾಜ್ಯಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ ನಂತರ ಶಿಕಾರಿಪುರದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ. ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು

Comments

Leave a Reply

Your email address will not be published. Required fields are marked *