ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಹೆಚ್ಚಿದ ಬೆದರಿಕೆ – ಏರ್ ಇಂಡಿಯಾ ವಿಮಾನ ರದ್ದು

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಬೆದರಿಕೆಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ವಿಮಾನಯಾನ ಕಂಪನಿ ಏರ್ ಇಂಡಿಯಾ ತನ್ನ ದೆಹಲಿಯಿಂದ ಮಾಸ್ಕೋಗೆ ತೆರಳಬೇಕಿದ್ದ ವಿಮಾನವನ್ನು ರದ್ದುಗೊಳಿಸಿದೆ.

ಉಕ್ರೇನ್-ರಷ್ಯಾ ಯುದ್ಧದ ಮಧ್ಯೆ ಭಾರತ ಬೆದರಿಕೆಗಳನ್ನು ಗ್ರಹಿಸಿದ್ದು, ದೆಹಲಿ-ಮಾಸ್ಕೋ ವಿಮಾನವನ್ನು ರದ್ದುಗೊಳಿಸಿದೆ. ಈಗಾಗಲೇ ವಿಮಾನದ ಟಿಕೇಟ್‌ಗಳನ್ನು ಖರೀದಿಸಿದ್ದ ಪ್ರಯಾಣಿಕರಿಗೆ ಏರ್ ಇಂಡಿಯಾ ಸಂಪೂರ್ಣ ಮರುಪಾವತಿ ಮಾಡುತ್ತದೆ ಎಂದು ಭರವಸೆ ನೀಡಿದೆ. ಇದನ್ನೂ ಓದಿ: ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್

ರಷ್ಯಾದ ರಾಯಭಾರ ಕಚೇರಿ ಈ ಬಗ್ಗೆ ಟೆಲಿಗ್ರಾಮ್ ಮೂಲಕ ಮಾಹಿತಿ ನೀಡಿದೆ. ಭಾರತೀಯ ವಿಮಾಮಯಾನ ಸಂಸ್ಥೆ ಏರ್ ಇಂಡಿಯಾ ದೆಹಲಿ-ಮಾಸ್ಕೋ ಮಾರ್ಗದಲ್ಲಿ ಪ್ರಯಾಣಿಸಬೇಕಿದ್ದ ವಿಮಾನವನ್ನು ಸದ್ಯ ಸ್ಥಗಿತಗೊಳಿಸಿದೆ. ಈಗಿನ ಪರಿಸ್ಥಿತಿಯಲ್ಲಿ ವಿಮಾನ ಪ್ರಯಾಣ ಪುನರಾರಂಭ ಅನಿಶ್ಚಿತವಾಗಿದೆ. ರದ್ದಾದ ವಿಮಾನ ಪ್ರಯಾಣಿಕರಿಗೆ ಏರ್ ಇಂಡಿಯಾ ಟಿಕೆಟ್‌ನ ಸಂಪೂರ್ಣ ಮರುಪಾವತಿ ಮಾಡುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ

ವಿಮಾನ ಹಾರಾಟ ಸ್ಥಗಿತವಾಗಿದ್ದರೂ ಸದ್ಯ ತಾಷ್ಕೆಂಟ್, ಇಸ್ತಾಂಬುಲ್, ದುಬೈ, ಅಬುಧಾಬಿ, ದೋಹಾ ಹಾಗೂ ಇತರ ಸ್ಥಳಗಳ ಮೂಲಕ ಸಾರಿಗೆ ಮಾರ್ಗಗಳನ್ನು ಬಳಸಿಕೊಂಡು ದೆಹಲಿಯಿಂದ ಮಾಸ್ಕೋಗೆ ಪ್ರಯಾಣಿಸಲು ಸಾಧ್ಯವಿದೆ ಎಂದು ರಷ್ಯಾದ ರಾಯಭಾರ ಕಚೇರಿ ತಿಳಿಸಿದೆ.

Comments

Leave a Reply

Your email address will not be published. Required fields are marked *