ನಾನು ಕೊಡಲ್ಲ, ರಾಜೀನಾಮೆ ಕೊಟ್ಟವ್ರ ಮನವೋಲಿಕೆಗೆ ಬಂದಿದ್ದೇನೆ: ಸೋಮಶೇಖರ್

ಬೆಂಗಳೂರು: ನಾನು ರಾಜೀನಾಮೆ ಕೊಡಲು ಬಂದಿಲ್ಲ. ರಾಜೀನಾಮೆ ಕೊಟ್ಟಿರುವ ಶಾಸಕರ ಮನವೋಲಿಕೆಗೆ ಬಂದಿದ್ದೇನೆ ಎಂದು ಶಾಸಕ ಎಸ್.ಟಿ.ಸೋಮಶೇಕರ್ ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್‍ನಲ್ಲಿ ರಾಜೀನಾಮೆ ಪರ್ವ ಶುರುವಾಗುತ್ತಿದ್ದಂತೆ ಅನೇಕ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಎಸ್.ಟಿ.ಸೋಮಶೇಕರ್ ಅವರು, ಪಕ್ಷದ ಶಾಸಕರು ರಾಜೀನಾಮೆ ಕೊಡುತ್ತಿದ್ದಾರೆ. ಅವರ ಮನವೊಲಿಸಿ ವಾಪಸ್ ಕರೆದುಕೊಂಡು ಹೋಗುತ್ತೇನೆ ಎಂದರು.

ಯಾರ ಮನವೊಲಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಕಾಂಗ್ರೆಸ್‍ನ ಎಲ್ಲಾ ಶಾಸಕರನ್ನೂ ಕರೆದುಕೊಂಡು ಹೋಗುತ್ತೇನೆ. ಯಾವುದೇ ಶಾಸಕರು ರಾಜೀನಾಮೆ ಕೊಡುವುದಿಲ್ಲ ಬಿಡಿ ಎಂದು ಹೇಳಿದರು.

ಶಾಸಕರ ಜೊತೆಗೆ ರಾಜರಾಜೇಶ್ವರಿ ಶಾಸಕ ಮುನಿರತ್ನ ಕೂಡ ಇದ್ದರು. ಶಾಸಕ ರಾಮಲಿಂಗಾರೆಡ್ಡಿ ಅವರು ಕೂಡ ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬೆಂಗಳೂರಿನ 5 ಜನ ಶಾಸಕರು ಕೂಡ ರಾಜೀನಾಮೆ ನೀಡಲಿದ್ದಾರೆ.

ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಅವರು ಮಾಧ್ಯಮಗಳ ವಿರುದ್ಧ ಗುಡುಗಿದ್ದಾರೆ. ನೀವು ರಾಜೀನಾಮೆ ಅಂಗೀಕರಿಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಕೋಪದಿಂದ ಪ್ರತಿಕ್ರಿಯೆ ನೀಡಿದ ಸ್ಪೀಕರ್, ಯೂ ಆರ್ ನಾಟ್ ಹ್ಯೂಮನ್ ಬೀಯಿಂಗ್? ನಿಮಗೆ ಮಾನವೀಯತೆ ಇಲ್ಲವೇ? ಗೆಟ್ ಔಟ್ ಫ್ರಂ ಹಿಯರ್. ಇಲ್ಲಿಂದ ನಡಿರೀ. ಆಸ್ಪತ್ರೆಯಲ್ಲಿ ಜನರು ಸಾಯುತ್ತಿದ್ದಾರೆ. ನಿಮಗೆ ಬೈಟ್ ಕೊಡಬೇಕಾ ಎಂದು ಕೆಂಡಾಮಂಡಲವಾದ ಪ್ರಸಂಗವೂ ನಡೆಯಿತು.

ಶಾಸಕರು ರಾಜೀನಾಮೆ ನೀಡುತ್ತಿದ್ದ ಬೆನ್ನಲ್ಲೇ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿದ್ದರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡಿ

Comments

Leave a Reply

Your email address will not be published. Required fields are marked *