ವೃಕ್ಷಮಾತೆಗೆ `ಛಲವಾದಿ ರತ್ನ’ ಪ್ರಶಸ್ತಿ ಪ್ರಧಾನ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಬೆಳಲಗೆರೆಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಛಲವಾದಿ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು.

ಇಂದು ಬೆಳಗೆರೆಯಲ್ಲಿ ಕಟ್ಟೆಮನೆ ವಂಶಸ್ಥರು ಏಕಾದಶಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್ ರವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ `ಛಲವಾದಿ ರತ್ನ’ ಎಂಬ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಸಾಲುಮರದ ತಿಮ್ಮಕ್ಕರ ಸೇವೆಯನ್ನು ಹಾಡಿಹೊಗಳಿದ್ದಾರೆ.

ಸರ್ಕಾರಿ ಶಾಲೆ ಮಕ್ಕಳಿಗೆ ಬಸ್ ಪಾಸ್ ವಿಚಾರ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ್, ಮುಂದಿನ ದಿನಗಳಲ್ಲಿ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಪಾಸ್ ಕೊಡುವ ಚಿಂತನೆ ಮಾಡಿರುವುದಾಗಿ ಹೇಳಿದ್ದಾರೆ. ಅಲ್ಲದೇ ಮೊದಲನೇ ಹಂತದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಪಾಸ್ ವಿತರಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ದೇಶದಲ್ಲಿರುವ ಜಾತಿ ವರ್ಗೀಕರಣ ನಿರ್ನಾಮ ಆಗ್ಬೇಕು: ಪರಮೇಶ್ವರ್

Comments

Leave a Reply

Your email address will not be published. Required fields are marked *