ಮೊದಲ ಬಾರಿಗೆ ಒಂದೇ ಸಿನಿಮಾದಲ್ಲಿ ‘ತ್ರಿ’ ಬ್ರದರ್ಸ್ ಸಂಗಮ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಇದೇ ಮೊದಲ ಬಾರಿಗೆ ಮೂವರು ಸಹೋದರರು ಒಂದೇ ಸಿನಿಮಾ ಅಭಿನಯಿಸುತ್ತಿದ್ದು, ಕಮಾಲ್ ಮಾಡಲು ಬರುತ್ತಿದ್ದಾರೆ.

ಸ್ಯಾಂಡಲ್‍ವುಡ್‍ನಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಮೂವರು ಸಹೋದರರಿದ್ದು, ಇದುವರೆಗೂ ಒಂದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೆ ಡೈಲಾಗ್ ಕಿಂಗ್ ಸಾಯಿ ಕುಮಾರ್, ಆರ್ಮುಗಂ ಖ್ಯಾತಿಯ ರವಿ ಶಂಕರ್ ಹಾಗೂ ಡೈರೆಕ್ಟರ್ ಕಮ್ ಆ್ಯಕ್ಟರ್ ಅಯ್ಯಪ್ಪ ಪಿ ಶರ್ಮ ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಭರಾಟೆ’ ಸಿನಿಮಾದಲ್ಲಿ ಈ ಮೂವರು ಸಹೋದರರು ಅಭಿನಯಿಸುತ್ತಿದ್ದಾರೆ. ಭರಾಟೆ ಸಿನಿಮಾದ ಮುಖ್ಯ ಪಾತ್ರದಲ್ಲಿ ರವಿ ಶಂಕರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸಾಯಿಕುಮಾರ್ ಹಾಗೂ ಅಯ್ಯಪ್ಪ ಕೂಡ ಇಬ್ಬರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ರವಿ ಶಂಕರ್ ಹಾಗೂ ಅಯ್ಯಪ್ಪ ಇಬ್ಬರ ಶೂಟಿಂಗ್ ಸಿನಿಮಾದಲ್ಲಿ ಸಂಪೂರ್ಣಗೊಂಡಿದೆ. ಇನ್ನೂ ನಟ ಸಾಯಿ ಕುಮಾರ್ ಪಾತ್ರದ ಸಿನಿಮಾ ಚಿತ್ರೀಕರಣ ನಡೆಯಬೇಕಿದೆ.

ಮೂವರು ಸಹೋದರರು ಸ್ಯಾಂಡಲ್‍ವುಡ್ ಮಾತ್ರವಲ್ಲದೇ ಬೇರೆ ಭಾಷೆಯಲ್ಲೂ ಅಭಿನಯಿಸಿದ್ದಾರೆ. ಅಯ್ಯಪ್ಪ ಅವರು ಇತ್ತೀಚೆಗೆ ಬಿಡುಗಡೆಯಾದ ನಟ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಭರಾಟೆ ಸಿನಿಮಾ ‘ಬಹದ್ದೂರ್’ ಸಿನಿಮಾದ ನಿರ್ದೇಶಕ ಚೇತನ್ ಕಾಂಬಿನೇಷನ್‍ನಲ್ಲಿ ಮೂಡಿ ಬರುತ್ತಿದೆ. ಈಗಾಗಲೇ ಸಿನಿಮಾದಲ್ಲಿ ನಟ ಶ್ರೀಮುರಳಿ ಪೋಸ್ಟರ್ ಮತ್ತು ಟೀಸರ್ ಬಿಡುಗಡೆ ಮಾಡಿದ್ದು, ಡೈಲಾಗ್ ಮೂಲಕವೇ ಸಾಕಷ್ಟು ಸದ್ದು ಮಾಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *