ಕಟೀಲ್ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಸಲೀಂ ಅಹಮ್ಮದ್

ಹಾವೇರಿ: ನಳಿನ್ ಕುಮಾರ್ ಕಟೀಲ್ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಇದೆಲ್ಲಾ ವಿಚಾರ ನಳೀನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿಲ್ಲ. ಅವರ ಈ ಮಾತುಗಳು ದುರ್ದೈವ, ಅದು ಅವರ ವ್ಯಕ್ತಿತ್ವ ತೋರಿಸುತ್ತಿದೆ. ಇಂದಿರಾಗಾಂಧಿ ಅವರು ದೇಶದ ಐಕ್ಯತೆಗೆ ಪ್ರಾಣ ಕೊಟ್ಟಿದ್ದಾರೆ. 16 ವರ್ಷ ಈ ರಾಷ್ಟ್ರವನ್ನು ಆಳಿ, ಇಡೀ ಪ್ರಪಂಚದಲ್ಲಿ ಉಕ್ಕಿನ ಮಹಿಳೆ ಎಂದು ಬಿರುದು ಪಡೆದಿದ್ದರು ಎಂದರು.

ಬಿಜೆಪಿಯ ಪ್ರಧಾನಮಂತ್ರಿ ಆಗಿದ್ದ ವಾಜಪೇಯಿ ಅವರು ಇಂದಿರಾಗಾಂಧಿ ಅವರಿಗೆ ದುರ್ಗೆ ಎಂದು ಕರೆದಿದ್ದರು. ರಾಜೀವ್ ಗಾಂಧಿ ಅವರು ದೇಶದ ಐಕ್ಯತೆಗಾಗಿ ಪ್ರಾಣಾರ್ಪಣೆ ಮಾಡಿದರು. ಇಂತಹ ಪರಿವಾರದ ಬಗ್ಗೆ ಕಟೀಲು ಮಾತನಾಡಿರುವುದು ನಿಜವಾಗಿಯೂ ಕೀಳು ಭಾಷೆ. ಕಟೀಲ್ ಅವರ ಈ ಮಾತುಗಳನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯನಿಗೆ ಹೃದಯಾಘಾತ

ಅರ್ಥ ಮಾಡಿಕೊಳ್ಳಬೇಕು, ಒಂದು ಪಕ್ಷದ ಅಧ್ಯಕ್ಷರಾಗಿ ಎಷ್ಟು ಮಾತಾಡಬೇಕು ಅಷ್ಟು ಮಾತಾಡಬೇಕು. ಜಾಸ್ತಿ ಮಾತಾಡಿದ್ರೆ ಜನ ನಗುತ್ತಾರೆ ಎಂದು ಕಿಡಿಕಾರಿದ್ದಾರೆ. ಇನ್ನೂ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟುಗಳು ಬರುತ್ತೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆಡಳಿತದಿಂದ ಬೇಸತ್ತು ಹೋಗಿದ್ದಾರೆ ಎಂದರು.

Comments

Leave a Reply

Your email address will not be published. Required fields are marked *