ಚಂದನವನದ ಹಿರಿಯ ಮೇಕಪ್‌ ಕಲಾವಿದ ಕೇಶವಣ್ಣ ನಿಧನ

ಮೈಸೂರು: ಸ್ಯಾಂಡಲ್‍ವುಡ್ ಹಿರಿಯ ಮೇಕಪ್ ಮ್ಯಾನ್ ಎಂ.ಎಸ್. ಕೇಶವಣ್ಣ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಶವಣ್ಣ ಅವರು ಕಳೆದ ಎರಡು ದಿನಗಳಿಂದ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಇಂದು ಮೈಸೂರಿನಲ್ಲಿ ಕೇಶವಣ್ಣ ಅವರ ಅಂತ್ಯ ನೆರೆವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

25-30 ವರ್ಷಗಳ ಕಾಲ ರಾಜ್‍ಕುಮಾರ್ ಅವರ ಕಂಪನಿಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಸೇವೆ ಸಲ್ಲಿಸಿದ ಕೇಶವಣ್ಣ ಅವರು, ಮೊದಲ ಬಾರಿಗೆ ಹಾಸ್ಯ ಕಲಾವಿದ ನರಸಿಂಹ ರಾಜು ಅವಿಗೆ ಮೇಕಪ್ ಮಾಡುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ರಾಜ್‍ಕುಮಾರ್, ರಜನಿಕಾಂತ್, ಅಂಬರೀಷ್, ಪುನೀತ್ ರಾಜ್ ಕುಮಾರ್, ಅನಂತ್ ನಾಗ್, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ಸ್ಟಾರ್ ನಟರಿಗೆ ಮೇಕಪ್ ಮಾಡಿದ್ದಾರೆ. ಅಲ್ಲದೇ ಪೃಥ್ವಿ ರಾಜ್ ಕಪೂರ್, ಬಾಲಣ್ಣ, ಉದಯ ಕುಮಾರ್, ವಜ್ರಮುನಿ ಸೇರಿದಂತೆ ಅನೇಕ ಕಲಾವಿದರಿಗೆ ಮೇಕಪ್ ಮಾಡಿದ್ದಾರೆ.  ಇದನ್ನೂ ಓದಿ: ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‌ಗೆ ಮಾತೃ ವಿಯೋಗ

ಅಂದಿನ ಸೂಪರ್ ಹಿಟ್ ಸಿನಿಮಾ ನಾ ನಿನ್ನ ಬಿಡಲಾರೆ ಚಿತ್ರದಲ್ಲಿ ನಟ ಅನಂತ್ ನಾಗ್ ಅವರಿಗೆ ದೆವ್ವದ ಮೇಕಪ್ ಅನ್ನು ಕೇಶವಣ್ಣ ಅವರು ಮಾಡಿದ್ದರು. ಈ ಸಿನಿಮಾದಲ್ಲಿ ಅನಂತ್ ನಾಗ್ ಅವರ ಲುಕ್ ನೋಡಿ ಜನ ಭಯಗೊಂಡಿದ್ದರು. ಕೇಶವಣ್ಣ ಅವರ ಮಾಡಿದ್ದ ಮೇಕಪ್‍ಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ಗಂಧದ ಗುಡಿ ರಿಲೀಸ್ ಡೇಟ್ ಘೋಷಣೆ : ಅಕ್ಟೋಬರ್ 28ಕ್ಕೆ ತೆರೆಗೆ

ಸಾಕ್ಷಾತ್ಕಾರ, ಹುಲಿಯ ಹಾಲಿನ ಮೇವು, ಮಯೂರ, ಶಾಂತಿ ಕ್ರಾಂತಿ, ಸಂಗೊಳ್ಳಿ ರಾಯಣ್ಣ ಮೊದಲಾದ ಚಿತ್ರಗಳಲ್ಲಿ ಕೇಶವಣ್ಣ ಕೆಲಸ ಮಾಡಿದ್ದು, ಕೊನೆಯದಾಗಿ ಕುರಕ್ಷೇತ್ರ ಸಿನಿಮಾದಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *