ನಾಗಿಣಿ ಅವತಾರದಲ್ಲಿ ಎಂಟ್ರಿ ಕೊಡಲಿದ್ದಾರೆ ಸಂಗೀತಾ ಭಟ್

ಸ್ಯಾಂಡಲ್‌ವುಡ್‌ಗೆ `ರೂಪಾಂತರ’ ಚಿತ್ರದ ಮೂಲಕ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವ ನಟಿ ಸಂಗೀತಾ ಭಟ್ ಈಗ ಕಿರುತೆರೆಗೆ ವಿಶೇಷ ಪಾತ್ರದ ಮೂಲಕ ಪಾದಾರ್ಪಣೆ ಮಾಡಿದ್ದಾರೆ. ನಾಗಿಣಿ ಅವತಾರದಲ್ಲಿ ಸಂಗೀತಾ ಭಟ್ ಬರುತ್ತಿದ್ದಾರೆ.

ಎರಡನೇ ಸಲ, ಪ್ರೀತಿ ಗೀತಿ ಇತ್ಯಾದಿ, ಮಾಮು ಟೀ ಅಂಗಡಿ, ದಯವಿಟ್ಟು ಗಮನಿಸಿ, ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟಿ ಸಂಗೀತಾ ಭಟ್ ತಮ್ಮ ವೈಯಕ್ತಿಕ ಜೀವನದತ್ತ ಗಮನ ಹರಿಸುತ್ತಿದ್ದರು. ಇದೀಗ ಮತ್ತೆ ಸಿನಿಮಾಗೆ ಕಂಬ್ಯಾಕ್ ಆಗಿದ್ದಾರೆ. ಕಿರುತೆರೆಯಲ್ಲಿ ಛಾಪೂ ಮೂಡಿಸಲು ರೆಡಿಯಾಗಿದ್ದಾರೆ. ಇದನ್ನೂ ಓದಿ:ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

ಖಾಸಗಿ ವಾಹಿನಿಯ `ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ’ ಸೀರಿಯಲ್‌ನಲ್ಲಿ ವಿಶೇಷ ಪಾತ್ರದಲ್ಲಿ ಅತಿಥಿಯಾಗಿ ನಿರ್ವಹಿಸಿದ್ದಾರೆ. ನಾಗರಪಂಚಮಿ ಪ್ರಯುಕ್ತ ನಾಗಮಣಿ ರಹಸ್ಯ ಎಂಬ ಎಪಿಸೋಡ್‌ಗಾಗಿ ವಿಶೇಷ ಪಾತ್ರ ಮಾಡಿದ್ದಾರೆ. 3 ಗಂಟೆಗಳ ಮಹಾ ಸಂಚಿಕೆ ಇದಾಗಿದೆ. ಈ ಸೀರಿಯಲ್ ಸಂಗೀತಾ ಭಟ್ ನಾಗಿಣಿಯಾಗಿ ಪಾತ್ರ ನಿರ್ವಹಿಸಿದ್ದಾರೆ. ಜುಲೈ 31ರಂದು ಸಂಜೆ 6 ಗಂಟೆಗೆ ಸಂಚಿಕೆ ಪ್ರಸಾರವಾಗಲಿದೆ. ಸೀರಿಯಲ್ ಪ್ರೋಮೋ ಮೂಲಕ ಹೈಪ್ ಕ್ರಿಯೇಟ್ ಮಾಡಿರುವ ಸೀರಿಯಲ್, ಪ್ರಸಾರದ ನಂತರ ಹೇಗೆಲ್ಲಾ ಕಮಾಲ್ ಮಾಡಬಹುದು ಅಂತಾ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *