ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಶಾಲಾ ಬಾಲಕಿ ಸಾವು

ಬೆಳಗಾವಿ: ಪಕ್ಕದ ಮನೆಗ ಓದಲು ಹೋಗಿ ವಾಪಸ್ ಮನೆಗೆ ಬರುವಾಗ ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಶಾಲಾ ಬಾಲಕಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಹುಲಿಕಟ್ಟಿ ಗ್ರಾಮದ ಚೂನವ್ವ ಸರ್ವಿ(8) ಮೃತ ದುರ್ದೈವಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ವಿದ್ಯುತ್ ಸ್ಪರ್ಶಿಸಿ ಚೂನವ್ವ ಸರ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆ ಜೂ.24ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೇಯಸಿ ದೂರಾಗಿದ್ದಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದು ಪ್ರಾಣ ಬಿಟ್ಟ!

ಇದೀಗ ಬಾಲಕಿ ಸಾವಿಗೆ ಕಾರಣರಾದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಡೀಸೆಲ್ ಕೊರತೆ- ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ: BMTC ಎಂಡಿ ಸ್ಪಷ್ಟನೆ

Live Tv

Comments

Leave a Reply

Your email address will not be published. Required fields are marked *