ಕುರಿ ಸಂತೆಗೆ ಸೆಕ್ಷನ್ 144 ಜಾರಿ

ಕೊಪ್ಪಳ: ಕುರಿ ಸಂತೆಗೂ ಸೆಕ್ಷನ್ 144 ಜಾರಿ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ಕೃಷಿ ಮಾರುಕಟ್ಟೆ ನಡೆಯುತ್ತಿದ್ದ ಕುರಿ ಸಂತೆಯನ್ನು ಈಗ ಶಿಫ್ಟ್ ಮಾಡಲಾಗಿದೆ. ಈ ಹಿಂದೆ 2014ರ ಲೋಕಸಭಾ ಚುನಾವಣೆ ವೇಳೆ ಕೂಕನಪಳ್ಳಿಯಿಂದ ಬೂದಗುಂಪಾ ಗ್ರಾಮಕ್ಕೆ ಶಿಫ್ಟ್ ಆಗಿದ್ದ ಕುರಿ ಸಂತೆಯನ್ನು ಇದೀಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕೂಕನಪಳ್ಳಿಗೆ ಗ್ರಾಮಕ್ಕೆ ಶಿಫ್ಟ್ ಮಾಡಲಾಗಿದೆ.

ಸಂಸದ ಸಂಗಣ್ಣ ಕರಡಿ ಸ್ವಗ್ರಾಮ ಕೂಕನಪಳ್ಳಿಗೆ ಶಿಫ್ಟ್ ಮಾಡಿದ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಸೆಕ್ಷನ್ 144 ಜಾರಿಗೆ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಬೂದಗುಂಪ ಮತ್ತು ಕುಕನಪಳ್ಳಿ ಎರಡು ಕಡೆ ಕುರಿ ಸಂತೆ ನಡೆಯುತ್ತಿತ್ತು. ಆದರೆ ಇಂದಿನಿಂದ ಕುಕನಪಳ್ಳಿಯಲ್ಲಿ ಮಾತ್ರ ಪ್ರತಿ ಶುಕ್ರವಾರ ಕುರಿ ಸಂತೆ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Comments

Leave a Reply

Your email address will not be published. Required fields are marked *