ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರ್ ಚಾಲನೆ- ಸಾರ್ವಜನಿಕರಿಂದ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಸರಣಿ ಅಪಘಾತ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.

ಹನುಮಂತನಗರ 50 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಸನಾಂಭ ಟ್ರಾವೆಲ್ಸ್ ಗೆ ಸೇರಿದ ಇನ್ನೋವಾ ಕಾರನ್ನು ಚಾಲಕ ಅಭಿಷೇಕ್ ಓಡಿಸುತ್ತಿದ್ದ. ಮದ್ಯಪಾನ ಸೇವಿಸಿದ್ದ ಅಭಿಷೇಕ್ ಅಮಲಿನಲ್ಲಿ ಕಾರನ್ನು ಅಡ್ಡಾದಿಡ್ಡಿ ಓಡಿಸಿ ಸರಣಿ ಅಪಘಾತ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸದ್ಯ ಬಸವನಗುಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಿರ್ಲಕ್ಷ್ಯ ಚಾಲನೆಯಡಿ ಚಾಲಕನ ವಿರುದ್ಧ ಕೇಸ್ ದಾಖಲಾಗಿದೆ. ಪೊಲೀಸರು ಆರೋಪಿ ಡ್ರೈವರ್ ಅಭಿಷೇಕ್ ನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಈ ಅಪಘಾತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಡ್ರೈವರ್ ಪಾರಾಗಿದ್ದಾನೆ.

Comments

Leave a Reply

Your email address will not be published. Required fields are marked *