ರಾಸಲೀಲೆ ಪ್ರಕರಣ: ಮಾಜಿ ಸಚಿವ ಹೆಚ್‍ವೈ ಮೇಟಿಗೆ ಕ್ಲೀನ್ ಚಿಟ್?

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‍ವೈ ಮೇಟಿ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡುವ ಸಾಧ್ಯತೆಯಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಿಐಡಿಯಿಂದ ತನಿಖೆಗೆ ಆದೇಶಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿಗೆ ಯಾರಿಂದಲೂ ಮೇಟಿ ಅವರ ವಿರುದ್ಧ ದೂರು ಬಂದಿರಲಿಲ್ಲ. ರಾಸಲೀಲೆಯಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯೂ ಸಹ ದೂರು ನೀಡಿರಲಿಲ್ಲ. ಹೀಗಾಗಿ ಯಾವುದೇ ದೂರು ಇಲ್ಲದ ಹಿನ್ನಲೆಯಲ್ಲಿ ಮೇಟಿ ಅವರಿಗೆ ಕ್ಲೀನ್ ಚಿಟ್ ಸಿಗೋ ಸಾಧ್ಯತೆ ಇದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಸಿಐಡಿ ವರದಿ ಸಲ್ಲಿಸಲಿದೆ.

ರಾಸಲೀಲೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವ ಹಿನ್ನಲೆಯಲ್ಲಿ ಮತ್ತೆ ಸಚಿವ ಸ್ಥಾನ ಪಡೆಯಲು ಹೆಚ್‍ವೈ ಮೇಟಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಗೃಹ ಕಚೇರಿ ಕೃಷ್ಣದಲ್ಲಿ ಹೆಚ್‍ವೈ ಮೇಟಿ ಕಾಣಿಸಿಕೊಂಡಿದ್ದು, ಕ್ಲೀನ್ ಚಿಟ್ ವರದಿ ತೋರಿಸಿ ಮತ್ತೆ ಸಚಿವ ಸ್ಥಾನ ನೀಡುವಂತೆ ಸಿಎಂಗೆ ಕೇಳುವ ಸಾಧ್ಯತೆಯಿದೆ.

ಏನಿದು ಪ್ರಕರಣ: ಅಬಕಾರಿ ಸಚಿವರಾಗಿದ್ದ ಹೆಚ್‍ವೈ ಮೇಟಿ ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಬ್ಬರೊಂದಿಗೆ ಲೈಂಗಿಕ ಸಂರ್ಪಕದಲ್ಲಿ ತೊಡಗಿದ್ದ ಸಿಡಿಯನ್ನ ಆರ್‍ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಕಳೆದ ಡಿಸೆಂಬರ್‍ನಲ್ಲಿ ಬಿಡುಗಡೆ ಮಾಡಿದ್ದರು. ಮಾಧ್ಯಮಗಳಲ್ಲಿ ವಿಡಿಯೋ ಬಿಡುಗಡೆಯಾದ ಬಳಿಕ ಹೆಚ್‍ವೈ ಮೇಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Comments

Leave a Reply

Your email address will not be published. Required fields are marked *