ಲೈಂಗಿಕ ಕಿರುಕುಳ ಕೇಸ್ – ವಕೀಲ ರಾಜೇಶ್ ನ್ಯಾಯಾಲಯಕ್ಕೆ ಶರಣು

ಮಂಗಳೂರು: ಇಂಟರ್ನ್‍ಶಿಪ್ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ವಕೀಲ ರಾಜೇಶ್ ಕೊನೆಗೂ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ನಗರದ ಮೂರನೇ ಜೆ.ಎಂ.ಎಫ್.ಸಿ ಕೋರ್ಟ್‍ಗೆ ವಕೀಲ ಕೆ.ಎಸ್.ಎನ್.ರಾಜೇಶ್ ಶರಣಾಗಿದ್ದಾನೆ. ಮಂಗಳೂರಿನ ಪ್ರಖ್ಯಾತ ವಕೀಲನಾಗಿದ್ದ ರಾಜೇಶ್ ವಿರುದ್ದ ಕಾನೂನು ವಿದ್ಯಾರ್ಥಿನಿ ದೂರು ನೀಡಿದ್ದರು. ಆರೋಪಿ ವಕೀಲನಿಂದ ನಿರಂತರ ಲೈಂಗಿಕ ಕಿರುಕುಳದ ಜೊತೆಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಅಕ್ಟೋಬರ್ 19 ರಂದು ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ

ದೂರು ದಾಖಲಾದ ಬಳಿಕ ಕಳೆದ ಎರಡು ತಿಂಗಳಿನಿಂದ ಆರೋಪಿ ನಾಪತ್ತೆಯಾಗಿದ್ದ. ಸುಪ್ರೀಂ ಕೋರ್ಟ್‍ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಇದನ್ನೂ ಓದಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

 

Comments

Leave a Reply

Your email address will not be published. Required fields are marked *