ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ: ಸಿಪಿಐ(ಎಂ)ಗೆ ಸುಪ್ರೀಂ ಪ್ರಶ್ನೆ

supreme court 12

ನವದೆಹಲಿ: ದೆಹಲಿಯ ಶಾಹೀನ್‌ ಬಾಗ್‌ ಪ್ರದೇಶದಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಪ್ರಕರಣದಲ್ಲಿ ತಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ತೆರವು ಕಾರ್ಯಾಚರಣೆಯನ್ನು ಪ್ರಶ್ನಿಸಿ ಸಿಪಿಐ(ಎಂ) ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿತ್ತು. ಇಲ್ಲಿ ನೆಲೆಸಿರುವ ನಿವಾಸಿಗಳು ಅನಧಿಕೃತ ನಿವಾಸಿಗಳಲ್ಲ. ಈ ಆಸ್ತಿಗಳ ನೆಲಸಮ ಪ್ರಕ್ರಿಯೆ ನೈಸರ್ಗಿಕ ನ್ಯಾಯ ಮತ್ತು ಭಾರತದ ಸಂವಿಧಾನದ ತತ್ವಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಕಾನೂನುಬಾಹಿರ ಮತ್ತು ಅಮಾನವೀಯ ಕ್ರಮವಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ನಾ. ನಾಗೇಶ್ವರ್‌ ರಾವ್‌ ಮತ್ತು ನ್ಯಾ.ಬಿಆರ್‌ ಘವಿ ಅವರಿದ್ಧ ದ್ವಿಸದಸ್ಯ ಪೀಠ, ಇದರಲ್ಲಿ ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ಖಾರವಾಗಿ ಪ್ರಶ್ನಿಸಿತು. ಇದನ್ನೂ ಓದಿ: ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

ಸಿಪಿಐ(ಎಂ) ಪಕ್ಷವು ಏಕೆ‌ ಅರ್ಜಿಯನ್ನು ಸಲ್ಲಿಸಿದೆ. ಸಂತ್ರಸ್ತ ವ್ಯಕ್ತಿ ಇಲ್ಲಿಗೆ ಅರ್ಜಿ ಸಲ್ಲಿಸಿದರೆ ನಾವು ಅದನ್ನು ಅರ್ಥಮಾಡಿಕೊಳ್ಳಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದದಂತೆಯಾವುದೇ ವ್ಯಕ್ತಿ ಇಲ್ಲವೇ? ಸಂತ್ರಸ್ತ ವ್ಯಕ್ತಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿ. ಈ ಅರ್ಜಿಯನ್ನು ನಾವು ಮಾನ್ಯ ಮಾಡುವುದಿಲ್ಲ ಎಂದು ಹೇಳಿತು.

ಏನಿದು ಪ್ರಕರಣ?
ದೆಹಲಿಯ ಬಿಜೆಪಿ ಮುಖ್ಯಸ್ಥ ಅದೇಶ್‌ ಸಿಂಗ್‌ ಅವರು ದಕ್ಷಿಣ ದೆಹಲಿಯ ಮಹಾನಗರ ಪಾಲಿಕೆಗೆ ಪತ್ರ ಬರೆದು, ರೋಹಿಂಗ್ಯಾ, ಬಾಂಗ್ಲಾದೇಶಿಯರು ಮತ್ತು ಸಮಾಜ ವಿರೋಧಿ ಶಕ್ತಿಗಳು ಶಾಹೀನ್‌ ಬಾಗ್‌ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಇವುಗಳನ್ನು ತೆರವು ಮಾಡಬೇಕು ಎಂದು ಮನವಿ ಮಾಡಿದ್ದರು.

ಈ ಪತ್ರದ ಬೆನ್ನಲ್ಲೇ ಯಾವುದೇ ಗಲಾಟೆಗಳು ಆಗದೇ ಇರಲು ದಕ್ಷಿಣ ದೆಹಲಿಯ ಜಿಲ್ಲಾಡಳಿತ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಇಂದು ಬೆಳಗ್ಗೆಯಿಂದ ಅಕ್ರಮ ಕಟ್ಟಡಗಳನ್ನು ತೆರವು ಮಾಡಲು ಮುಂದಾಗಿತ್ತು. ತೆರವು ಮಾಡಲು ಮುಂದಾದಾಗ ಸ್ಥಳಿಯ ನಿವಾಸಿಗಳು ಪ್ರತಿಭಟನೆ ಮಾಡಲು ಆರಂಭಿಸಿದರು. ಈ ಪ್ರತಿಭಟನೆಗೆ ಆಪ್‌ ಮತ್ತು ಕಾಂಗ್ರೆಸ್‌ ನಾಯಕರು ಸಾಥ್‌ ನೀಡಿದ್ದರು. ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.  ಇದನ್ನೂ ಓದಿ: ದಾವುದ್ ಇಬ್ರಾಹಿಂನ ಸಹಚರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಎನ್‍ಐಎ ದಾಳಿ

ದಕ್ಷಿಣ ದೆಹಲಿ ಪಾಲಿಕೆ 10 ದಿನಗಳ ಕಾಲ ಶಾಹೀನ್‌ ಬಾಗ್‌ ವಲಯದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದೆ. ಸಿಎಎ ವಿರೋಧಿಸಿ ಶಾಹೀನ್‌ಬಾಗ್‌ನಲ್ಲಿ 2019ರ ಡಿಸೆಂಬರ್‌ 15 ರಿಂದ 2020ರ ಮಾರ್ಚ್‌ 24ರವರೆಗೆ ಭಾರೀ ಪ್ರತಿಭಟನೆ ನಡೆದಿತ್ತು.

Comments

Leave a Reply

Your email address will not be published. Required fields are marked *