ಅಫ್ರಿದಿ ಹೇಳಿದ್ದು ಸರಿ, ಕಾಶ್ಮೀರ ಎಂದಿಗೂ ಭಾರತದದ್ದೇ: ರಾಜನಾಥ್ ಸಿಂಗ್

ನವದೆಹಲಿ: ಕಾಶ್ಮೀರ ವಿಷಯದ ಬಗ್ಗೆ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ವ್ಯಕ್ತಪಡಿಸಿರುವ ಅಭಿಪ್ರಾಯ ಸರಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಚತ್ತೀಸ್‍ಗಢದ ರಾಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್ ಅವರು, ಅಫ್ರಿದಿ ಹೇಳಿಕೆ ಸರಿಯಾಗಿದ್ದು, ಪಾಕಿಸ್ತಾನಕ್ಕೆ ತನ್ನ ಬಳಿ ಇರುವ 4 ಪ್ರಾಂತ್ಯಗಳನ್ನೇ ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ. ಇನ್ನು ಕಾಶ್ಮೀರವನ್ನು ಹೇಗೆ ನೋಡಿಕೊಳ್ಳುತ್ತದೆ? ಕಾಶ್ಮೀರ ಎಂದಿಗೂ ಭಾರತದ ಭಾಗವಾಗಿರುತ್ತದೆ ಎಂದು ಹೇಳಿದರು.

ಶಾಹಿದ್ ಅಫ್ರಿದಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬ್ರಿಟಿಷ್ ಪಾರ್ಲಿಮೆಂಟ್ ವಿದ್ಯಾರ್ಥಿಗಳೊಂದಿಗಿನ ಸಂವಾದದ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪಾಕಿಸ್ತಾನಕ್ಕೆ ಕಾಶ್ಮೀರ ಬೇಡ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದ್ದು, ಈ ಹೇಳಿಕೆ ಪಾಕಿಸ್ತಾನದ ಹೊಸ ಸರ್ಕಾರಕ್ಕೆ ತೀವ್ರ ಮುಜುಗರ ಆಗುವಂತೆ ಮಾಡಿತ್ತು.

ಪಾಕಿಸ್ತಾನವನ್ನು ಒಗ್ಗೂಡಿಸುವಲ್ಲಿ ಇಮ್ರಾನ್ ಖಾನ್ ವಿಫಲರಾಗಿದ್ದಾರೆ. ದೇಶದ ನಾಗರೀಕರನ್ನು ಉಗ್ರರಿಂದ ರಕ್ಷಿಸಲು ಸರ್ಕಾರ ವಿಫಲವಾಗಿದೆ. ಹೀಗಾಗಿ ಕಾಶ್ಮೀರ ಪಾಕಿಸ್ತಾನಕ್ಕೆ ಅಗತ್ಯವಿಲ್ಲ. ಕಾಶ್ಮೀರ ಒಂದು ಸ್ವತಂತ್ರ ದೇಶವಾಗಬೇಕು. ಆ ಮೂಲಕ ಮಾನವೀಯತೆ ಉಳಿಯಬೇಕು. ಕಾಶ್ಮೀರದಲ್ಲಿ ಜನರು ಸಾಯಬಾರದು. ಅಲ್ಲಿನ ಜನ ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಲು ಬಿಡಬೇಕು. ಹೀಗಾಗಿ ಜಾತಿ ಯಾವುದೇ ಆಗಿದ್ದರೂ, ಮೊದಲು ಮಾನವೀಯತೆ ಮುಖ್ಯವಾಗಬೇಕು. ಅಲ್ಲದೇ ಕಾಶ್ಮೀರದಲ್ಲಿ ನಡೆಯುತ್ತಿರುವ ಹತ್ಯೆಗಳಿಗೆ ಪೂರ್ಣವಿರಾಮ ಬೀಳಬೇಕೆಂದು ಅಭಿಪ್ರಾಯ ಪಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *