ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಕಾಂಗ್ರೆಸ್‍ನ ಶತ್ರುಘ್ನ ಸಿನ್ಹಾ

ನವದೆಹಲಿ: ಬಿಜೆಪಿಯಲ್ಲಿದ್ದಾಗ ಹಾಗೂ ಕಾಂಗ್ರೆಸ್ ಸೇರಿದ ನಂತರವೂ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಲೇ ಕಾಲ ಕಳೆಯುತ್ತಿದ್ದ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರ ಮಾತು ಅತ್ಯಂತ ಧೈರ್ಯಶಾಲಿ, ಉತ್ತಮ ಸಂಶೋಧನೆ ಹೊಂದಿದ ಹಾಗೂ ಚಿಂತನೆಗೆ ಉತ್ತೇಜಿಸುವಂತಹ ಭಾಷಣವಾಗಿದೆ ಎಂದು ಹಾಡಿ ಹೊಗಳಿದ್ದಾರೆ. ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು. ಬಿಜೆಪಿಯನ್ನು ‘ಟು ಮ್ಯಾನ್ ಆರ್ಮಿ, ಒನ್ ಮ್ಯಾನ್ ಶೋ’ ಎಂದು ಸಿನ್ಹಾ ಟೀಕಿಸಿದ್ದರು. ಇದನ್ನು ಓದಿ: ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

ಇಂದು ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಾನು ಟೀಕಿಸಲು ಕುಖ್ಯಾತಿ ಪಡೆದವನು. ಪ್ರಧಾನಿಗಳೇ ಆಗಸ್ಟ್ 15ರಂದು ನೀವು ಮಾಡಿದ ಭಾಷಣ ಅತ್ಯಂತ ಧೈರ್ಯಶಾಲಿ, ಉತ್ತಮ ಸಂಶೋಧನೆ ಮತ್ತು ಚಿಂತನೆಯನ್ನು ಪ್ರಚೋದಿಸುವುದಾಗಿದೆ ಎಂದು ಒಪ್ಪಿಕೊಳ್ಳುತ್ತೇನೆ. ದೇಶ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಅದ್ಭುತವಾಗಿ ವಿವರಿಸಿದ್ದೀರಿ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣವನ್ನು ಹೊಗಳಿದ ಕಾಂಗ್ರೆಸ್ ನಾಯಕರ ಪೈಕಿ ಶತ್ರುಘ್ನ ಸಿನ್ಹಾ ಎರಡನೇಯವರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿ ದೇಶದ ವಿವಿಧ ಸಮಸ್ಯೆ ಹಾಗೂ ಅವುಗಳಿಗೆ ಪರಿಹಾರಗಳ ಕುರಿತು ವಿವರಿಸಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಮೂರು ಅಂಶಗಳನ್ನು ಕಡ್ಡಾಯವಾಗಿ ಸ್ವಾಗತಿಸಲೇಬೇಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಟ್ವೀಟ್ ಮಾಡಿದ್ದರು.

https://www.youtube.com/watch?v=3Dkd9kUA4z4

Comments

Leave a Reply

Your email address will not be published. Required fields are marked *