ಶೀನಾ ಬೋರಾ ಹತ್ಯೆ ಕೇಸ್‌- ಇಂದ್ರಾಣಿಗೆ ಮುಖರ್ಜಿಗೆ ಜಾಮೀನು ಮಂಜೂರು

ನವದೆಹಲಿ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಐಎನ್‍ಎಕ್ಸ್ ಕಂಪನಿಯ ಮಾಲಕಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ನ್ಯಾ. ಎಲ್‌ ನಾಗೇಶ್ವರ ರಾವ್‌ ಮತ್ತು ನ್ಯಾ. ಬಿ.ಆರ್‌ ಗವಾಯ್‌ ಅವರಿದ್ದ ಪೀಠ ಜಾಮೀನು ಮಂಜೂರು ಮಾಡಿದೆ. ಬಾಂಬೆ ಹೈಕೋರ್ಟ್‌ 2021ರ ನವೆಂಬರ್‌ನಲ್ಲಿ ಶೀನಾ ಬೋರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಈ ಆದೇಶವನ್ನು ಶೀನಾ ಬೋರಾ ಸುಪ್ರೀಂನಲ್ಲಿ ಪ್ರಶ್ನಿಸಿದ್ದರು.

ಸಾಂದರ್ಭಿಕ ಸಾಕ್ಷ್ಯ ಮತ್ತು ಶೇ.50 ರಷ್ಟು ಸಾಕ್ಷಿಗಳು ಪ್ರಾಸಿಕ್ಯೂಶನ್‌ ಪರವಾಗಿ ಹೇಳಿಕೆ ನೀಡಿದ್ದರೂ ವಿಚಾರಣೆ ಶೀಘ್ರವೇ ಮುಕ್ತಾಯವಾಗಲಾರದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: 31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

ಆರೋಪ ಏನು?
2012 ಏಪ್ರಿಲ್‌ 24 ರಂದು ಇಂದ್ರಾಣಿ ಮುಖರ್ಜಿ, ಕಾರು ಚಾಲಕ ಶ್ಯಾಮ್‌ವರ್‌ ರೈ ಮತ್ತು ಮಾಜಿ ಪತಿ ಸಂಜೀವ್ ಖನ್ನಾ ಸೇರಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದಾರೆ. ಪುತ್ರಿಯ ಶವವನ್ನು ರಾಯಗಢ ಜಿಲ್ಲೆಯ ಕಾಡಿನಲ್ಲಿ ಎಸೆದು ಸುಟ್ಟು ಹಾಕಲಾಗಿದೆ ಎಂಬ ಆರೋಪ ಇಂದ್ರಾಣಿ ಮುಖರ್ಜಿ ಮೇಲಿದೆ.

ಈ ಸಂಬಂಧ 2015ರಲ್ಲಿ ಮುಂಬೈ ಪೊಲೀಸರು ಇಂದ್ರಾಣಿ ಮುಖರ್ಜಿ ಅವರನ್ನು ಬಂಧಿಸಿತ್ತು. ಹೈ ಪ್ರೊಫೈಲ್‌ ಪ್ರಕರಣದ ಹಿನ್ನೆಲೆಯಲ್ಲಿ ನಂತರ ಇದರ ತನಿಖೆ ಸಿಬಿಐಗೆ ವರ್ಗಾವಣೆಯಾಗಿತ್ತು. ಕಳೆದ 6.5 ವರ್ಷಗಳಿಂದ ಇಂದ್ರಾಣಿ ಮುಖರ್ಜಿ ಜೈಲಿನಲ್ಲಿದ್ದರು.

Comments

Leave a Reply

Your email address will not be published. Required fields are marked *