ಸ್ನಾನಕ್ಕೆ ನದಿಗಿಳಿದು ಅಪಾಯಕ್ಕೆ ಸಿಲುಕಿದ ವ್ಯಕ್ತಿ ಬದುಕುಳಿದಿದ್ದೆ ರೋಚಕ

ಮಂಡ್ಯ: ಸ್ನಾನ ಮಾಡಲು ನದಿಗೆ ಇಳಿದಿದ್ದ ವ್ಯಕ್ತಿ ನೀರಿನ ಮಧ್ಯ ಸಿಲುಕಿ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ನದಿಯಲ್ಲಿ ಜರುಗಿದೆ.

ತಮಿಳುನಾಡು ಮೂಲದ ಏಳುಮಲೈ ಎಂಬ ವ್ಯಕ್ತಿ ನಿನ್ನೆ ಸಂಜೆ ಶಿಂಷಾ ನದಿಯಲ್ಲಿ ಸ್ನಾನ ಮಾಡಲು ನದಿಗೆ ಇಳಿದಿದ್ದಾನೆ. ಸ್ನಾನ ಮುಗಿಸಿ ನದಿಯಿಂದ ಹೊರಗೆ ಬರುವ ಹೊತ್ತಿಗೆ ನದಿಯಲ್ಲಿ ಇದ್ದಕ್ಕಿದ್ದ ಹಾಗೆ ನೀರಿನ ಪ್ರಮಾಣ ಹೆಚ್ಚಾಗಿದೆ. ಈ ವೇಳೆ ಗಾಬರಿಗೊಂಡ ಏಳುಮಲೈ ಬಂಡೆ ಕಲ್ಲಿನ ಮೇಲೆ ನಿಂತು ರಕ್ಷಣೆ ಮಾಡುವಂತೆ ಕೂಗಿಕೊಂಡಿದ್ದಾನೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕ ಅರೆಸ್ಟ್

ಈ ದೃಶ್ಯಕಂಡ ಸ್ಥಳೀಯರು ಈ ವಿಷಯವನ್ನು ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರೆಸಿ ಹಗ್ಗ ಹಾಗೂ ಏಣಿಯ ಮೂಲಕ ಏಳುಮಲೈಯನ್ನು ರಕ್ಷಣೆ ಮಾಡಿದ್ದಾರೆ. ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಲು ಕಾರಣ ಎನ್ನಲಾಗಿದೆ. ಇದನ್ನೂ ಓದಿ:  ಕೋವಿಡ್ ಲಸಿಕೆಯ ಡಬಲ್ ಡೋಸ್‍ನಿಂದ 1 ವರ್ಷಕ್ಕಿಂತ ಹೆಚ್ಚಿನ ಸುರಕ್ಷೆ

Comments

Leave a Reply

Your email address will not be published. Required fields are marked *