ದೇವರು ನಮಗೆ ಯಾಕೆ ಪದೇ ಪದೇ ನೋವು ಕೊಡುತ್ತಿದ್ದಾನೋ ಗೊತ್ತಿಲ್ಲ: ಶಿವರಾಜ್‍ಕುಮಾರ್

ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಶಿವರಾಂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ. ಶಿವರಾಂ ಅವರ ಆರೋಗ್ಯ ವಿಚಾರಿಸಲು ನಟ ಶಿವರಾಜ್‍ಕುಮಾರ್ ಆಸ್ಪತ್ರೆ ಬಂದಿದ್ದರು. ಈ ವೇಳೆ ಅವರ ಜೊತೆಗೆ ಕಳೆದಿರುವ ಹಳೆಯ ನೆನಪುಗಳನ್ನು ಮೆಲಕು ಹಾಕಿ ಭಾವುಕರಾಗಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಫ್ಯಾಮಿಲಿಯ ಯಾವುದೇ ಪರಿಸ್ಥಿತಿಯಲ್ಲಿಯೂ ಅವರು ನಮ್ಮ ಜೊತೆಗೆ ಇದ್ದರು. ದೇವರು ಕೈ ಬಿಡಲ್ಲ, ಚಿಕ್ಕ ವಯಸ್ಸಿನಿಂದಲೂ ನೋಡುತ್ತಿದ್ದೇವೆ. ನಮ್ಮ ಕುಟುಂಬದಲ್ಲಿ ಅವರು ಒಬ್ಬರು ಆಗಿದ್ದಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ನಾವೆಲ್ಲ ಅಯಪ್ಪ ದೇವಸ್ಥಾನಕ್ಕೆ ಮೂರು ವರ್ಷಗಳ ಹಿಂದೆ ಹೋಗಿದ್ದೇವು. ಆಗ ಅವರಿಗೆ 81 ವರ್ಷ, ಆದರು ಯಾವುದೇ ಸಹಾಯವಿಲ್ಲದೆ ಬೆಟ್ಟ ಹತ್ತವರು, ಮನಸ್ಸು ಬಂದಗೆಲ್ಲಾ ಅಯಪ್ಪ ದೇವಸ್ಥಾನ ಕ್ಕೆ ಅವರು ಹೋಗುತ್ತಿದ್ದರು. ನಾವು ತಮ್ಮನ ಕಳೆದುಕೊಂಡ ನೋವುನಲ್ಲಿ ಇದ್ದೇವು, ದೇವರು ನಮಗೆ ಯಾಕೆ ಪದೇ ಪದೇ ಇತರ ನೋವು ಕೊಡುತ್ತಿದ್ದಾನೋ ಗೊತ್ತಿಲ್ಲ ಎಂದು ದುಃಖಿತರಾಗಿದ್ದಾರೆ. ಇದನ್ನೂ ಓದಿ: ನನ್ನ ಹುಟ್ಟಿಸಿದ್ಯಾಕೆ?- ತಾಯಿಯ ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಯುವತಿ ಕೇಸ್

ಅಯಪ್ಪನ ಪೂಜೆ ವೇಳೆ ಇತರ ಆಗಿದೆ ಅಂದ್ರೆ ದೇವರು ಅವರನ್ನ ಕೈ ಬಿಡಲ್ಲ. ಈ ಪರಿಸ್ಥಿತಿಯಲ್ಲಿ ಅವರನ್ನ ನೋಡೋಕೆ ತುಂಬಾ ಕಷ್ಟ ಆಗುತ್ತದೆ. ಮತ್ತೆ ಅವರು ಗುಣಮುಖರಾಗಿ ಬರಬೇಕು ಅಂತ ನಮ್ಮಗೂ ಆಸೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

Comments

Leave a Reply

Your email address will not be published. Required fields are marked *