ಕಾಂಗ್ರೆಸ್‍ನಿಂದ ಋಣಮುಕ್ತವಾದ್ರೆ ಸಾಕೆಂದು ಸಿಎಂ ನನ್ಮುಂದೆ ಹೇಳಿದ್ದಾರೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್‍ನಿಂದ ಋಣಮುಕ್ತರಾದರೆ ಸಾಕು ಎಂಬ ಭಾವನೆಯಲ್ಲಿ ಸಿಎಂ ಕುಮಾರಸ್ವಾಮಿ ಇದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೊಸ ಬಾಂಬ್ ಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೆಣೆದ ಬಲೆಯಲ್ಲಿ ಕುಮಾರಸ್ವಾಮಿ ಅವರು ಸಿಕ್ಕಿಕೊಂಡು ಒದ್ದಾಡುತ್ತಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರೆ ಚೆನ್ನಾಗಿತ್ತೆಂದು ನಮ್ಮ ಮಂತ್ರಿಗಳು ತಲೆ ಚಚ್ಚಿಕೊಂಡಿದ್ದಾರೆಂದು ನನ್ನ ಬಳಿ ಕುಮಾರಸ್ವಾಮಿ ಹೇಳಿದ್ದಾರೆ. ಇದು ಸುಳ್ಳು ಎನ್ನುವುದಾದರೆ ಅವರ ಆತ್ಮ ಸಾಕ್ಷಿಯಿಂದ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ಪ್ರಪಂಚದ ಭೂಪಟದಲ್ಲಿ ಪಾಕಿಸ್ತಾನ ಎನ್ನುವುದು ಇರತ್ತೋ? ಇಲ್ಲವೋ ನೋಡೋಕೆ ನಾಲ್ಕು ದಿನ ಕಾಯಬೇಕಿದೆ. ಬಿನ್ ಲಾಡೆನ್ ಹೊಡೆಯೋಕೆ ಅಮೆರಿಕದವರು ಎಷ್ಟು ಸಮಯ ತಗೆದುಕೊಂಡಿದ್ದಾರೆ. ಒಬ್ಬ ವೀರ ಯೋಧನ ರೀತಿ ಪ್ರಧಾನಿ ಮೋದಿ ದೇಶ ಕಾಯುತ್ತಿದ್ದಾರೆ. ಸರಿಯಾದ ಸಮಯದಲ್ಲಿ ಉಗ್ರರರಿಗೆ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಈ ಹಿಂದೆ ಒಬ್ಬ ಯೋಧನನ್ನು ಹತ್ಯೆಯ ವಿಚಾರವಾಗಿ ಹತ್ತು ದಿನ ಪಾರ್ಲಿಮೆಂಟ್‍ನಲ್ಲಿ ಚರ್ಚೆಯಾದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಈಗ ಪ್ರಧಾನಿ ಮೋದಿ ಅವರು ಹಂತ ಹಂತವಾಗಿ ಪಾಕಿಸ್ತಾನಕ್ಕೆ ಉತ್ತರ ನೀಡುತ್ತಿದ್ದಾರೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *