ಲಂಚಬಾಕ ಪಾಲಿಕೆ ಎಂಜಿನಿಯರ್ ಎಸಿಬಿ ಬಲೆಗೆ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪಾಲಿಕೆಯ ಸಹಾಯಕ ಎಂಜಿನಿಯರ್ ಲಂಚ ಪಡೆಯುವಾಗ ಅಧಿಕಾರಿಗಳು ಹಿಡಿದಿದ್ದಾರೆ.

ಪಾಲಿಕೆ ಸಹಾಯಕ ಎಂಜಿನಿಯರ್ ಹಾಲೇಶಪ್ಪ 7 ಸಾವಿರ ರೂ. ಲಂಚ ಪಡೆಯುವಾದ ಎಸಿಬಿ ಬಲೆಗೆ ಸಿಕ್ಕ ಅಧಿಕಾರಿ. ನಗರದ ಗಾಂಧಿನಗರ ನಿವಾಸಿ ವೆಂಕಟೇಶ್ ಶೆಟ್ಟಿ ತಮ್ಮ ನಿವಾಸದ ಪಕ್ಕದಲ್ಲಿದ್ದ ಖಾಲಿ ನಿವೇಶವನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸಿಕೊಡುವಂತೆ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪಾಲಿಕೆ ಎಂಜಿನಿಯರ್ ಹಾಲೇಶಪ್ಪ ವಾಣಿಜ್ಯ ಉದ್ದೇಶಕ್ಕಾಗಿ ನಿವೇಶನ ಪರಿವರ್ತನೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ.

ಲಂಚ ನೀಡಲು ನಿರಾಕರಿಸಿದ ಹಾಗೂ ಅಧಿಕಾರಿಗಳ ವರ್ತನೆಯಿಂದ ಬೇಸತ್ತ ನಿವೇಶನದ ಮಾಲೀಕ ವೆಂಕಟೇಶ್ ಶೆಟ್ಟಿ ಈ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪಾಲಿಕೆ ಸಹಾಯಕ ಎಂಜಿನಿಯರ್ ಹಾಲೇಶಪ್ಪ 7 ಸಾವಿರ ರೂ. ಲಂಚ ಪಡೆಯುವಾಗ ಕಚೇರಿಯಲ್ಲಿಯೇ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಲಂಚಬಾಕ ಎಂಜಿನಿಯರನ್ನು ವಶಕ್ಕೆ ಪಡೆದಿರುವ ಎಸಿಬಿ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಭ್ರಷ್ಟ ಎಂಜಿನಿಯರ್ ಹಾಲೇಶಪ್ಪ ಈ ಹಿಂದೆ ಚಿಕ್ಕಮಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿಗೂ ಒಳಗಾಗಿದ್ದ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *