ಹಾಡಹಗಲೇ ರೌಡಿಶೀಟರ್ ಸಹೋದರನನ್ನ ಕೊಚ್ಚಿ ಬರ್ಬರ ಕೊಲೆ

ಶಿವಮೊಗ್ಗ: ನಗರದ ಕುಖ್ಯಾತ ರೌಡಿಶೀಟರ್ ಹಂದಿ ಅಣ್ಣಿಯ ಸಹೋದರನನ್ನು ದುಷ್ಕರ್ಮಿಗಳು ಹಾಡಹಗಲೇ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ರೌಡಿಶೀಟರ್ ಗಿರೀಶ್ ಕೊಲೆಯಾದ ವ್ಯಕ್ತಿ. ನಗರದ ಗೋಪಾಳ ಬಡಾವಣೆಯ ಸಿದ್ದೇಶ್ವರ ವೃತ್ತದ ಬಳಿ ಘಟನೆ ನಡೆದಿದೆ. ಇಂದು ಮಧ್ಯಾಹ್ನ ರೌಡಿಶೀಟರ್ ಗಿರೀಶ್ ಹಾಗೂ ಅಜ್ರು ಎಂಬಾತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು ಎನ್ನಲಾಗಿದೆ. ಹೀಗಾಗಿಯೇ ಅಜ್ರು ತನ್ನ ಸಹೋದರ ಹಾಗೂ ಆತನ ಸ್ನೇಹಿತನೊಂದಿಗೆ ಸೇರಿ ಬೈಕ್‍ನಲ್ಲಿ ಬರುತ್ತಿದ್ದ ಗಿರೀಶ್‍ನನ್ನು ಅಡ್ಡ ಹಾಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾನೆ.

ಈ ಕೃತ್ಯಕ್ಕೆ ಅಜ್ರು ಹಾಗೂ ಗಿರೀಶ್ ನಡುವೆ ಇದ್ದ ಹಳೆಯ ವೈಷಮ್ಯವೂ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೌಡಿಶೀಟರ್ ಗಿರೀಶ್ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿಯೇ ಘಟನೆ ನಡೆದಿದ್ದರಿಂದ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತುಂಗಾನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Comments

Leave a Reply

Your email address will not be published. Required fields are marked *