ಶಿವಣ್ಣ, ಗೀತಾರನ್ನು ಕರೆದೊಯ್ದ ಐಟಿ ಅಧಿಕಾರಿಗಳು

ಬೆಂಗಳೂರು: ನಟ ಶಿವರಾಜ್ ಕುಮಾರ್ ಮನೆಯಲ್ಲಿ ಕಳೆದ ದಿನದಿಂದ ಇಂದು ಕೂಡ ಐಟಿ ಅಧಿಕಾರಿಗಳು ಕಾರ್ಯಚರಣೆಯನ್ನು ಮುಂದುವರಿಸಿದ್ದು, ಈಗ ಅಧಿಕಾರುಗಳು ಶಿವಣ್ಣ ಮತ್ತು ಅವರ ಪತ್ನಿ ಗೀತಾರನ್ನು ಬ್ಯಾಂಕಿಗೆ ಕರೆದುಕೊಂಡು ಹೋಗಿದ್ದಾರೆ.

ಗುರುವಾರ ದಾಳಿ ಮಾಡುವಾಗ ಅಧಿಕಾರಿಗಳು ಬ್ಯಾಂಕ್ ಖಾತೆ ಮತ್ತು ಲಾಕರ್ ಸೀಜ್ ಮಾಡಿದ್ದರು. ಹೀಗಾಗಿ ಇಂದು ಅಧಿಕಾರಿಗಳು ಬ್ಯಾಂಕ್ ಖಾತೆ, ಲಾಕರ್ ಪರಿಶೀಲನೆ ಮತ್ತು ಬ್ಯಾಂಕ್ ಲಾಕರ್ ಓಪನ್ ಮಾಡಲು ಶಿವಣ್ಣ ಮತ್ತು ಗೀತಾರನ್ನು ಬ್ಯಾಂಕಿಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಐಟಿ ದಾಳಿ ವೇಳೆ ಬೆಳಕಿಗೆ ಬಂತು ಮಹತ್ವದ ವಿಚಾರಗಳು

ಗುರುವಾರ ಅಧಿಕಾರಿಗಳು ದಾಳಿ ಮುಗಿಸಿ ವಾಪಸ್ ಹೋಗಿದ್ದರು. ಇಂದು ಬೆಳಗ್ಗೆ ನಟ ಶಿವರಾಜ್ ಕುಮಾರ್ ಮನೆಗೆ ಖಾಸಗಿ ಇನ್ನೋವಾ ಕಾರಿನಲ್ಲಿ ಇಬ್ಬರು ಐಟಿ ಅಧಿಕಾರಿ ಆಗಮಿಸಿದ್ದರು. ಗುರುವಾರ ರಾತ್ರಿ ಮನೆಯಲ್ಲೇ ತಂಗಿದ್ದ ಮೂವರು ಅಧಿಕಾರಿಗಳು ಸೇರಿ ಒಟ್ಟು ಐದು ಜನರ ಐಟಿ ಅಧಿಕಾರಿಗಳ ತಂಡ ಶಿವಣ್ಣನ ಮನೆಯಲ್ಲಿ ಕಾರ್ಯಚರಣೆಯನ್ನು ಮುಂದುವರಿಸಿತ್ತು. ನಂತರ ಸ್ವಲ್ಪ ಸಮಯದ ನಂತರ ಲ್ಯಾಪ್ ಟಾಪ್ ಹಿಡಿದು ಮತ್ತೆ ಒಬ್ಬರು ಹಿರಿಯ ಅಧಿಕಾರಿ ಸಮೇತ ಮೂವರು ಐಟಿ ಅಧಿಕಾರಿಗಳು ಆಗಮಿಸಿದ್ದರು.

ಒಬ್ಬ ಟೆಕ್ನಿಷಿಯನ್ ಅವರನ್ನು ಮನೆಗೆ ಕರೆಸಿಕೊಂಡು ಮನೆಯಲ್ಲಿರುವ ಕಂಪ್ಯೂಟರ್ ನಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇಬ್ಬರು ಮಹಿಳೆಯರು, ಒಬ್ಬರು ಟೆಕ್ನಿಷಿಯನ್, ಉಳಿದ ಎಳು ಜನರ ತಂಡದಿಂದ ಶಿವಣ್ಣ ಮನೆಯಲ್ಲಿ ಐಟಿ ದಾಳಿ ಮುಂದುವರಿದಿತ್ತು. ಜೊತೆಗೆ ಇಬ್ಬರು ಮಹಿಳಾ ಅಧಿಕಾರಿಗಳು ಗೀತಾ ಶಿವರಾಜ್ ಕುಮಾರ್ ಅವರನ್ನು ವಿಚಾರಣೆ ಕೂಡ ಮಾಡಿದ್ದರು ಎಂದು ತಿಳಿದು ಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *