ಶಾರ್ಟ್ ಸರ್ಕ್ಯೂಟ್- ಹಣ, ಬ್ಯಾಂಕ್ ದಾಖಲೆ ಬೆಂಕಿಗೆ ಆಹುತಿ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅವಘಡದಲ್ಲಿ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಹೊತ್ತಿ ಉರಿದಿದೆ.

ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿಯಿಂದಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಹೊತ್ತಿ ಉರಿದ ಪರಿಣಾಮ ಬ್ಯಾಂಕ್ ನಲ್ಲಿದ್ದ ಹಣ ಮತ್ತು ದಾಖಲಾತಿಗಳು ಸುಟ್ಟು ಭಸ್ಮವಾಗಿವೆ.

ಅಲ್ಲದೆ ಬ್ಯಾಂಕ್ ನಲ್ಲಿದ್ದ ಪೀಠೋಪಕರಣ, ಠೇವಣಿ, ಸಾಲದ ದಾಖಲೆ, ಕ್ಯಾಶ್ ಕೌಂಟಿಂಗ್ ಮಷೀನ್ ಬೆಂಕಿಗಾಹುತಿಯಾಗಿವೆ. ಬೆಂಕಿ ಹೊತ್ತಿಕೊಂಡ ನಂತರ ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ದಾಖಲೆಗಳು ಸುಟ್ಟು ಭಸ್ಮವಾಗಿದ್ದವು. ಕಿತ್ತೂರು ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ಬಳಿಕ ಹಾನಿಯಾದ ಬಗ್ಗೆ ಸಮಗ್ರ ಮಾಹಿತಿ ತಿಳಿದು ಬರಲಿದೆ.

Comments

Leave a Reply

Your email address will not be published. Required fields are marked *